ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ವಿವಿಧ ಕ್ಷೇತ್ರಗಳ ಗಣ್ಯರಿಗೆ ಆಮಂತ್ರಣವನ್ನು ನೀಡಲು ಆರಂಭಿಸಲಾಗಿದ್ದು, ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮಕ್ಕೆ ತೆರಳದಿರಲು ನಿರ್ಧರಿಸಿದೆ.
ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಬಿಜೆಪಿ ಪಕ್ಷದ ರಾಜಕೀಯ ಕಾರ್ಯಕ್ರಮ ಎಂದು ದೂಡಿರುವ ಕಾಂಗ್ರೆಸ್ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿತ್ತು. ಇದೀಗ ರಾಹುಲ್ ಗಾಂಧಿ ಇಂದು ( ಜನವರಿ 16 ) ನಾಗಲ್ಯಾಂಡ್ನ ರಾಜಧಾನಿ ಕೊಹಿಮಾದಲ್ಲಿ ನಡೆದ ಭಾರತ್ ಜೋಡ್ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿಯೂ ಇದೇ ಹೇಳಿಕೆಯನ್ನು ನೀಡಿದ್ದಾರೆ.
ಆರ್ಎಸ್ಎಸ್ ಮತ್ತು ಬಿಜೆಪಿ ಜನವರಿ 22ರ ಕಾರ್ಯಕ್ರಮವನ್ನು ಪೂರ್ಣವಾಗಿ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿವೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಇದು ಆರ್ಎಸ್ಎಸ್ ಬಿಜೆಪಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್ನ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದರು.
ಹಿಂದೂ ಧರ್ಮದ ವರಿಷ್ಠರು, ಹಿಂದೂ ಧರ್ಮದ ಮಠಾಧಿಪತಿಗಳೂ ಸಹ ಈ ಕಾರ್ಯವನ್ನು ರಾಜಕೀಯ ಕಾರ್ಯ ಎಂದು ಸಾರ್ವಜನಿಕವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗಾಗಿ ಭಾರತದ ಪ್ರಧಾನಿ ಹಾಗೂ ಆರ್ಎಸ್ಎಸ್ ಸುತ್ತ ವಿನ್ಯಾಸಗೊಳಿಸಲಾದ ಕಾರ್ಯಕ್ರಮಕ್ಕೆ ಹೋಗುವುದು ನನಗೆ ಸರಿ ಎನಿಸುವುದಿಲ್ಲ ಎಂದೂ ಸಹ ರಾಹುಲ್ ಗಾಂಧಿ ತಿಳಿಸಿದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…