ನವದೆಹಲಿ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಸಧ್ಯ 43 ಆಭ್ಯರ್ಥಿಗಳ 2ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯು ಸೇರಿದಂತೆ ವಿವಿಧ ರಾಜ್ಯಗಳಲ್ಲಿ 43 ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ಗೌರವ್ ಗೊಗೊಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಚಿಂದ್ವಾರದಿಂದ ಸ್ಪರ್ಧಿಸಲಿದ್ದಾರೆ.
ಘೋಷಿಸಲಾದ 43 ಅಭ್ಯರ್ಥಿಗಳಲ್ಲಿ 33 ಮಂದಿ ಒಬಿಸಿ, ಎಸ್ಸಿ, ಎಸ್ಟಿ ಅಥವಾ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರು ಎಂದಿದ್ದಾರೆ.
ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನ ಘೋಷಿಸಿತ್ತು. ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅವರ ಹೆಸರೂ ಇದ್ದು, ವಯನಾಡ್’ನಿಂದ ಸ್ಪರ್ಧಿಸಲಿದ್ದಾರೆ. ಇವರಲ್ಲದೆ, ಶಶಿ ತರೂರ್ ತಿರುವನಂತಪುರಂನಿಂದ ಮತ್ತು ಭೂಪೇಶ್ ಬಘೇಲ್ ರಾಜನಂದಗಾಂವ್ನಿಂದ ಸ್ಪರ್ಧಿಸಲಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…