ರಾಜಕೀಯ

ಕಾಂಗ್ರೆಸ್‌ನ ಲೋಕಸಭಾ ಅಭ್ಯರ್ಥಿಗಳ ಎರಡನೆ ಪಟ್ಟಿ ಬಿಡುಗಡೆ !

ನವದೆಹಲಿ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಸಧ್ಯ 43 ಆಭ್ಯರ್ಥಿಗಳ 2ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯು ಸೇರಿದಂತೆ ವಿವಿಧ ರಾಜ್ಯಗಳಲ್ಲಿ 43 ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.

ಗೌರವ್ ಗೊಗೊಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಚಿಂದ್ವಾರದಿಂದ ಸ್ಪರ್ಧಿಸಲಿದ್ದಾರೆ.

ಘೋಷಿಸಲಾದ 43 ಅಭ್ಯರ್ಥಿಗಳಲ್ಲಿ 33 ಮಂದಿ ಒಬಿಸಿ, ಎಸ್ಸಿ, ಎಸ್ಟಿ ಅಥವಾ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರು ಎಂದಿದ್ದಾರೆ.

ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನ ಘೋಷಿಸಿತ್ತು. ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅವರ ಹೆಸರೂ ಇದ್ದು, ವಯನಾಡ್’ನಿಂದ ಸ್ಪರ್ಧಿಸಲಿದ್ದಾರೆ. ಇವರಲ್ಲದೆ, ಶಶಿ ತರೂರ್ ತಿರುವನಂತಪುರಂನಿಂದ ಮತ್ತು ಭೂಪೇಶ್ ಬಘೇಲ್ ರಾಜನಂದಗಾಂವ್ನಿಂದ ಸ್ಪರ್ಧಿಸಲಿದ್ದಾರೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

1 min ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago