ನವದೆಹಲಿ : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ಆರಂಭಿಸಿದ್ದು, ಸಧ್ಯ 43 ಆಭ್ಯರ್ಥಿಗಳ 2ನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಮನ್ ಮತ್ತು ದಿಯು ಸೇರಿದಂತೆ ವಿವಿಧ ರಾಜ್ಯಗಳಲ್ಲಿ 43 ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.
ಗೌರವ್ ಗೊಗೊಯ್ ಅಸ್ಸಾಂನ ಜೋರ್ಹತ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಚಿಂದ್ವಾರದಿಂದ ಸ್ಪರ್ಧಿಸಲಿದ್ದಾರೆ.
ಘೋಷಿಸಲಾದ 43 ಅಭ್ಯರ್ಥಿಗಳಲ್ಲಿ 33 ಮಂದಿ ಒಬಿಸಿ, ಎಸ್ಸಿ, ಎಸ್ಟಿ ಅಥವಾ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರು ಎಂದಿದ್ದಾರೆ.
ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನ ಘೋಷಿಸಿತ್ತು. ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಅವರ ಹೆಸರೂ ಇದ್ದು, ವಯನಾಡ್’ನಿಂದ ಸ್ಪರ್ಧಿಸಲಿದ್ದಾರೆ. ಇವರಲ್ಲದೆ, ಶಶಿ ತರೂರ್ ತಿರುವನಂತಪುರಂನಿಂದ ಮತ್ತು ಭೂಪೇಶ್ ಬಘೇಲ್ ರಾಜನಂದಗಾಂವ್ನಿಂದ ಸ್ಪರ್ಧಿಸಲಿದ್ದಾರೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…