ರಾಜಕೀಯ

ಸಾವರ್ಕರ್‌ ಫೋಟೊ ವಿವಾದ: ಸಿಟಿ ರವಿ ನೀಡಿದ್ದ ʼಅಂಡಮಾನ್‌ ಜೈಲು ಭೇಟಿʼ ಆಫರ್‌ ಒಪ್ಪಿಕೊಂಡ ಪ್ರಿಯಾಂಕ್‌ ಖರ್ಗೆ

ವಿಧಾನಸಭೆಯಲ್ಲಿರುವ ಸಾವರ್ಕರ್‌ ಫೋಟೊ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ನಡುವಿನ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಈ ಫೋಟೊವನ್ನು ತೆರವುಗೊಳಿಸಲಾಗುತ್ತಂತೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ವಿಧಾನಸಭೆಯಲ್ಲಿ ಹಾಕಿರುವ ಸಾವರ್ಕರ್‌ ಫೋಟೊವನ್ನು ತೆಗೆದು ಹಾಕುವ ಅವಕಾಶ ನನಗೆ ಸಿಕ್ಕರೆ ಈಗಲೇ ತೆರವು ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಟ್ವೀಟ್‌ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದ ಸಿಟಿ ರವಿ ಸಾವರ್ಕರ್‌ ಬ್ರಿಟಿಷರು ನೀಡಿದ್ದ ಕಷ್ಟವನ್ನು ಅನುಭವಿಸಿದ್ದ ಸ್ಥಳವಾದ ಅಂಡಮಾನ್‌ ಜೈಲಿಗೆ ಬಂದು ನೋಡಿ ಎಂದು ಪ್ರಿಯಾಂಕ್‌ ಖರ್ಗೆಗೆ ಆಹ್ವಾನ ನೀಡಿದ್ದರು. ಈ ಆಹ್ವಾನದ ಕುರಿತು ಇದೀಗ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಸಿಟಿ ರವಿ ನೀಡಿದ್ದ ಅಂಡಮಾನ್‌ ಜೈಲು ಭೇಟಿಯನ್ನು ಸ್ವೀಕರಿಸಿದ್ದಾರೆ. ಆದರೆ ಈಗ ಅಲ್ಲಿಗೆ ಭೇಟಿ ನೀಡಲು ಆಗುವುದಿಲ್ಲ, ಬರ ಸಮಸ್ಯೆ ಮುಗಿದ ನಂತರ ಜುಲೈ ತಿಂಗಳಿನಲ್ಲಿ ಭೇಟಿ ನೀಡುತ್ತೇನೆ, ಅಲ್ಲಿಯವರೆಗೆ ಅವರ ಆಫರ್‌ ಇರುತ್ತಾ? ಎಂದು ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ.

ಸಿಟಿ ರವಿ ಆಫರ್‌ ಹೇಗಿತ್ತು?

ಟ್ವಿಟರ್‌ ಮೂಲಕ ಸಿಟಿ ರವಿ ಅವರು ಪ್ರಿಯಾಂಕ್‌ ಖರ್ಗೆಗೆ ನೀಡಿದ್ದ ಹೇಳಿಕೆಗೆ ಈ ಕೆಳಕಂಡಂತೆ ಟ್ವೀಟ್‌ ಮಾಡಿ ಅಂಡಮಾನ್ ಜೈಲಿಗೆ ಆಹ್ವಾನಿಸಿದ್ದರು.

” ಆತ್ಮೀಯರಾದ ಶ್ರೀಯುತ @PriyankKharge ಅವರೇ,

ತಾಯಿ ಭಾರತಿಯ ಮಡಿಲಿನಲ್ಲಿ ಜನಿಸಿದ ಮಹಾನ್ ರಾಷ್ಟ್ರೀಯವಾದಿ, ಕರಿನೀರ ವೀರ, ಹುತಾತ್ಮ ವೀರ್ ಸಾವರ್ಕರ್ ಅವರು, ಬ್ರಿಟಿಷರಿಂದ ಕಠಿಣ ಕಾರಾಗ್ರಹ ಶಿಕ್ಷೆಗೊಳಪಡಿಸುವ ತೀರ್ಪಿನಂತೆ, ಘೋರ ಕರಿನೀರಿನ ಶಿಕ್ಷೆ ಅನುಭವಿಸಿದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇರುವ ಸೆಲ್ಯುಲರ್ ಜೈಲಿಗೆ ಭೇಟಿ ನೀಡಲು ನಿಮ್ಮನ್ನು ಆಹ್ವಾನಿಸುತ್ತೇನೆ. ಅಂದ ಹಾಗೆ ನಿಮ್ಮ ಪ್ರವಾಸದ ಸಂಪೂರ್ಣ ಖರ್ಚುವೆಚ್ಚ ನಾನೇ ಭರಿಸುತ್ತೇನೆ.

ಅತ್ತ ನಿಮ್ಮ ನೆಚ್ಚಿನ ನೆಹರು, ಶಿಕ್ಷೆಯ ನೆಪದಲ್ಲಿ, ಬ್ರಿಟಿಷರ ಜೈಲುಗಳಲ್ಲಿ ಐಷಾರಾಮಿ ಉಪಚಾರ ಪಡೆಯುತ್ತಿರುವಾಗ, ಇತ್ತ ಅಂಡಮಾನಿನ ಜೈಲಿನಲ್ಲಿ ವೀರ್ ಸಾವರ್ಕರ್ ಯಾವ ರೀತಿಯ ನೋವು ಮತ್ತು ಸಂಕಟವನ್ನು ಅನುಭವಿಸಿದರು ಎಂಬ ಸಣ್ಣ ಅನುಭೂತಿ ನಿಮಗಾಗಬಹುದು.

ಸೆಲ್ಲ್ಯುಲರ್ ಜೈಲಿನ ಆವರಣದಲ್ಲೇ “ಸಾವರ್ಕರ್ ಮತ್ತು ನೆಹರು ಇವರಿಬ್ಬರಲ್ಲಿ ನಿಜವಾದ ಸ್ವಾತಂತ್ರ್ಯ ಹೋರಾಟಗಾರ ಯಾರು?” ಎಂಬುದರ ಕುರಿತು ಬಹಿರಂಗ ಚರ್ಚೆ ನಡೆಸಲು ನಾನು ನಿಮಗೆ ಸವಾಲು ಹಾಕುತ್ತೇನೆ.

ವಿನಾಯಕ ದಾಮೋದರ್ ಸಾವರ್ಕರ್ ಅವರ ಫೋಟೋವನ್ನು ವಿಧಾನಸಭೆ ಅಥವಾ ಪರಿಷತ್ತಿನಿಂದ ತೆಗೆಯುವ ದುಸ್ಸಾಹಸ ಮಾಡಿದರೆ ಇಡೀ ರಾಜ್ಯದ ಜನತೆಯಾದಿಯಾಗಿ ನಾವೆಲ್ಲರೂ ಉಗ್ರ ಪ್ರತಿಭಟನೆ ನಡೆಸುತ್ತೇವೆ.

ಇಂದು ನೀವು ಅಧಿಕಾರದಲ್ಲಿರಬಹುದು, ನೆನಪಿಡಿ, ಮುಂದೆ ನಾವು ಅಧಿಕಾರಕ್ಕೆ ಬಂದಾಗ ನೆಹರೂ ಅವರ ಭಾವಚಿತ್ರ ವಿಧಾನಸೌಧದಲ್ಲಿ ಹೇಗೆ ಇರುತ್ತದೆ ನೋಡೋಣ.

ನೆನಪಿಡಿ, ಪರಿವಾರವಾದದ ಬಲದಿಂದ ಬೆಳೆದಂತಹ ಹೊಗಳುಭಟ್ಟರು ಬೇಕು ಎಂದಾಗ ಭಾವಚಿತ್ರ ಇಡಲಿಕ್ಕೆ, ಬೇಡ ಅಂದಾಗ ತೆಗಯಲಿಕ್ಕೆ , ವೀರ ಸಾವರ್ಕರ್ ಅವರು ನಿಮ್ಮ ಹಾಗೆ ಅಥವಾ ನೆಹರು ಅವರ ಹಾಗೆ ವಂಶವಾದದಿಂದ ಬೆಳೆದವರಲ್ಲ.”

andolana

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

20 mins ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

43 mins ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

1 hour ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

2 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

5 hours ago