ಬೆಂಗಳೂರು : ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ, ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಅವರಿಗೆ ಹಣ ಕೊಡಿ ಅಂತ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ರೂ. ಘೋಷಣೆ ಮಾಡಿರುವುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಮೇಲೆ ಬಹಳಷ್ಟು ಗೌರವ ಇದೆ. ಮುಖ್ಯಮಂತ್ರಿ ಆದವರು ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಆದರೆ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲೆ ವಿಶೇಷವಾದ ಒಲವನ್ನು ಹೊಂದಿದ್ದಾರೆ. ನಮಗೆ ಸಂಘರ್ಷದ ಅವಶ್ಯಕತೆ ಇಲ್ಲ. ಆದರೆ ಮುಖಯಮಂತ್ರಿಗಳು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯನವರು ನಾನು ಕುಂಕುಮ ಹಚ್ಚಲ್ಲ, ಕೇಸರಿ ಪೇಟ ಹಾಕಲ್ಲ ಅಂತ ಹೇಳ್ತಾರೆ. ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ ಇದ್ರೆ ನಿಮ್ಮ ಆಸ್ತಿ ಮಾರಿ ಹಣ ಕೊಡಿ. ನೀವೆನು ದೇಶದ ಪ್ರಧಾನ ಮಂತ್ರಿನಾ ? ಇಲ್ಲ ಸರ್ಕಾರ ನಿಮ್ಮ ಆಸ್ತಿನಾ ? ಇಲ್ಲೇನು ಪಾಕಿಸ್ತಾನ ಆಡಳಿತ ಮಾಡುತ್ತಾ ? ಸಿದ್ದರಾಮಯ್ಯ ಅವರ ಪಕ್ಕದಲ್ಲಿ ಭಯೋತ್ಪಾದಕರು ಕುಳಿತುಕೊಳ್ತಾರೆ. ಮೀರ್ ಅವರು ಸಾಬ್ರಿಗೆ ತಲೆಬಾಗಬೇಕು ಅಂತಾರೆ. ಕರ್ನಾಟಕ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಹೀಗೆ ಮಾಡಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಥನವಾಗುತ್ತೆ. ನೀವು ಮೂರು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದ್ದೀರ. ಹೀಗೆ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಜನ ಮತ್ತೆ ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.
ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು. ತಕ್ಷಣವೇ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…
ವಾಷಿಂಗ್ಟನ್ : ಇರಾನ್ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…