ರಾಜಕೀಯ

ನಿಮ್ಮ ಆಸ್ತಿ ಮಾರಿ ಮುಸ್ಲಿಮರಿಗೆ ಹಣ ಕೊಡಿ : ಸಿದ್ದು ಮೇಲೆ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ, ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಅವರಿಗೆ ಹಣ ಕೊಡಿ ಅಂತ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ರೂ. ಘೋಷಣೆ ಮಾಡಿರುವುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಮೇಲೆ ಬಹಳಷ್ಟು ಗೌರವ ಇದೆ. ಮುಖ್ಯಮಂತ್ರಿ ಆದವರು ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಆದರೆ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲೆ ವಿಶೇಷವಾದ ಒಲವನ್ನು ಹೊಂದಿದ್ದಾರೆ. ನಮಗೆ ಸಂಘರ್ಷದ ಅವಶ್ಯಕತೆ ಇಲ್ಲ. ಆದರೆ ಮುಖಯಮಂತ್ರಿಗಳು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯನವರು ನಾನು ಕುಂಕುಮ ಹಚ್ಚಲ್ಲ, ಕೇಸರಿ ಪೇಟ ಹಾಕಲ್ಲ ಅಂತ ಹೇಳ್ತಾರೆ. ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ ಇದ್ರೆ ನಿಮ್ಮ ಆಸ್ತಿ ಮಾರಿ ಹಣ ಕೊಡಿ. ನೀವೆನು ದೇಶದ ಪ್ರಧಾನ ಮಂತ್ರಿನಾ ? ಇಲ್ಲ ಸರ್ಕಾರ ನಿಮ್ಮ ಆಸ್ತಿನಾ ? ಇಲ್ಲೇನು ಪಾಕಿಸ್ತಾನ ಆಡಳಿತ ಮಾಡುತ್ತಾ ? ಸಿದ್ದರಾಮಯ್ಯ ಅವರ ಪಕ್ಕದಲ್ಲಿ ಭಯೋತ್ಪಾದಕರು ಕುಳಿತುಕೊಳ್ತಾರೆ. ಮೀರ್‌ ಅವರು ಸಾಬ್ರಿಗೆ ತಲೆಬಾಗಬೇಕು ಅಂತಾರೆ. ಕರ್ನಾಟಕ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಹೀಗೆ ಮಾಡಿದ್ರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಪಥನವಾಗುತ್ತೆ. ನೀವು ಮೂರು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದ್ದೀರ. ಹೀಗೆ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಜನ ಮತ್ತೆ ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು. ತಕ್ಷಣವೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

lokesh

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

2 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

2 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

2 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

2 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

2 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

2 hours ago