ರಾಜಕೀಯ

ನಿಮ್ಮ ಆಸ್ತಿ ಮಾರಿ ಮುಸ್ಲಿಮರಿಗೆ ಹಣ ಕೊಡಿ : ಸಿದ್ದು ಮೇಲೆ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ, ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಅವರಿಗೆ ಹಣ ಕೊಡಿ ಅಂತ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ರೂ. ಘೋಷಣೆ ಮಾಡಿರುವುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಮೇಲೆ ಬಹಳಷ್ಟು ಗೌರವ ಇದೆ. ಮುಖ್ಯಮಂತ್ರಿ ಆದವರು ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಆದರೆ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲೆ ವಿಶೇಷವಾದ ಒಲವನ್ನು ಹೊಂದಿದ್ದಾರೆ. ನಮಗೆ ಸಂಘರ್ಷದ ಅವಶ್ಯಕತೆ ಇಲ್ಲ. ಆದರೆ ಮುಖಯಮಂತ್ರಿಗಳು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯನವರು ನಾನು ಕುಂಕುಮ ಹಚ್ಚಲ್ಲ, ಕೇಸರಿ ಪೇಟ ಹಾಕಲ್ಲ ಅಂತ ಹೇಳ್ತಾರೆ. ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ ಇದ್ರೆ ನಿಮ್ಮ ಆಸ್ತಿ ಮಾರಿ ಹಣ ಕೊಡಿ. ನೀವೆನು ದೇಶದ ಪ್ರಧಾನ ಮಂತ್ರಿನಾ ? ಇಲ್ಲ ಸರ್ಕಾರ ನಿಮ್ಮ ಆಸ್ತಿನಾ ? ಇಲ್ಲೇನು ಪಾಕಿಸ್ತಾನ ಆಡಳಿತ ಮಾಡುತ್ತಾ ? ಸಿದ್ದರಾಮಯ್ಯ ಅವರ ಪಕ್ಕದಲ್ಲಿ ಭಯೋತ್ಪಾದಕರು ಕುಳಿತುಕೊಳ್ತಾರೆ. ಮೀರ್‌ ಅವರು ಸಾಬ್ರಿಗೆ ತಲೆಬಾಗಬೇಕು ಅಂತಾರೆ. ಕರ್ನಾಟಕ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಹೀಗೆ ಮಾಡಿದ್ರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಪಥನವಾಗುತ್ತೆ. ನೀವು ಮೂರು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದ್ದೀರ. ಹೀಗೆ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಜನ ಮತ್ತೆ ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು. ತಕ್ಷಣವೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

lokesh

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

3 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

3 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

5 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

5 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

6 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

8 hours ago