ರಾಜಕೀಯ

ನಿಮ್ಮ ಆಸ್ತಿ ಮಾರಿ ಮುಸ್ಲಿಮರಿಗೆ ಹಣ ಕೊಡಿ : ಸಿದ್ದು ಮೇಲೆ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು : ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ, ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಅವರಿಗೆ ಹಣ ಕೊಡಿ ಅಂತ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ರೂ. ಘೋಷಣೆ ಮಾಡಿರುವುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಮೇಲೆ ಬಹಳಷ್ಟು ಗೌರವ ಇದೆ. ಮುಖ್ಯಮಂತ್ರಿ ಆದವರು ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಆದರೆ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಮೇಲೆ ವಿಶೇಷವಾದ ಒಲವನ್ನು ಹೊಂದಿದ್ದಾರೆ. ನಮಗೆ ಸಂಘರ್ಷದ ಅವಶ್ಯಕತೆ ಇಲ್ಲ. ಆದರೆ ಮುಖಯಮಂತ್ರಿಗಳು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯನವರು ನಾನು ಕುಂಕುಮ ಹಚ್ಚಲ್ಲ, ಕೇಸರಿ ಪೇಟ ಹಾಕಲ್ಲ ಅಂತ ಹೇಳ್ತಾರೆ. ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ ಇದ್ರೆ ನಿಮ್ಮ ಆಸ್ತಿ ಮಾರಿ ಹಣ ಕೊಡಿ. ನೀವೆನು ದೇಶದ ಪ್ರಧಾನ ಮಂತ್ರಿನಾ ? ಇಲ್ಲ ಸರ್ಕಾರ ನಿಮ್ಮ ಆಸ್ತಿನಾ ? ಇಲ್ಲೇನು ಪಾಕಿಸ್ತಾನ ಆಡಳಿತ ಮಾಡುತ್ತಾ ? ಸಿದ್ದರಾಮಯ್ಯ ಅವರ ಪಕ್ಕದಲ್ಲಿ ಭಯೋತ್ಪಾದಕರು ಕುಳಿತುಕೊಳ್ತಾರೆ. ಮೀರ್‌ ಅವರು ಸಾಬ್ರಿಗೆ ತಲೆಬಾಗಬೇಕು ಅಂತಾರೆ. ಕರ್ನಾಟಕ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಹೀಗೆ ಮಾಡಿದ್ರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಪಥನವಾಗುತ್ತೆ. ನೀವು ಮೂರು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದ್ದೀರ. ಹೀಗೆ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯ ವೇಳೆ ಜನ ಮತ್ತೆ ನಿಮ್ಮನ್ನು ತಿರಸ್ಕರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ರಾಜ್ಯದ ಜನರ ಬಳಿ ಕ್ಷಮೆ ಕೇಳಬೇಕು. ತಕ್ಷಣವೇ ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

lokesh

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago