ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕೂಡ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು,9 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಕೂಡಿ ಹಾಕಿ ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ಗಂಭಿರ ಆರೋಪ ಮಾಡಿದರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ದೇವೇಗೌಡರು ಡಿಸೈನ್ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಗಂಭೀರ ಆರೋಪ ಮಾಡಿದರು. 9 ವರ್ಷದ ಬಾಲಕಿಯನ್ನ ಕರೆದೋಯ್ದು ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ.ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಮುಖಭಂಗವಾಗುತ್ತದೆ. ಅಮೇರಿಕಾದಿಂದ ಹಣ ತಂದಿದ್ದ ವ್ಯಕ್ತಿಗೆ ಆಸ್ತಿ ಬರೆಸಿದರು ಎಂದು ಗಂಭಿರ ಆರೋಪ ಮಾಡಿದರು.
ಅವರು ಐಟಿ ಕಂಪನಿ ಸ್ಥಾಪನೆ ಮಾಡಲು ಹೊರಟಿದ್ದರು.ಅದರ ಹಿಂದಿನ ದಿನ ಸ್ಟಾಪ್ ಪೇಪರ್ ತಂದು ನಕಲಿ ಕ್ರಯ ಮಾಡಿದರು. 9 ವರ್ಷದ ಬಾಲಕಿ ಕೂಡಿಹಾಕಿ ಆಸ್ತಿಯನ್ನು ಬರೆಸಿಕೊಂಡರು.ಬಾಲಕಿಯನ್ನ ಗಂಗಯ್ಯ ತಿಮ್ಮಯ್ಯ ಎಂಬುವರ ಮನೆ ಪಕ್ಕದಲ್ಲಿಟ್ಟಿದ್ದರು.ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ 9 ದಿನ ಕೂಡಿ ಹಾಕಿದ್ದರು.ನಿನ್ನ ಮಗಳು ಬೇಕು ಎಂದರೆ ಆಸ್ತಿ ಬರೆದುಕೊಡು ಬಾಲಕಿ ತಾಯಿಯನ್ನು ಬೆದರಿಸಿ ಆಸ್ತಿ ಬರೆಸಿಕೊಂಡಿದ್ದರು.ಎಲ್ಲಾ ದಾಖಲೆಗಳು ನನ್ನ ಬಳಿ ಇವೆ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ದೇವೇಗೌಡ ಇದೀಗ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…