ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕೂಡ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು,9 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಕೂಡಿ ಹಾಕಿ ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ಗಂಭಿರ ಆರೋಪ ಮಾಡಿದರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ದೇವೇಗೌಡರು ಡಿಸೈನ್ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಗಂಭೀರ ಆರೋಪ ಮಾಡಿದರು. 9 ವರ್ಷದ ಬಾಲಕಿಯನ್ನ ಕರೆದೋಯ್ದು ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ.ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಮುಖಭಂಗವಾಗುತ್ತದೆ. ಅಮೇರಿಕಾದಿಂದ ಹಣ ತಂದಿದ್ದ ವ್ಯಕ್ತಿಗೆ ಆಸ್ತಿ ಬರೆಸಿದರು ಎಂದು ಗಂಭಿರ ಆರೋಪ ಮಾಡಿದರು.
ಅವರು ಐಟಿ ಕಂಪನಿ ಸ್ಥಾಪನೆ ಮಾಡಲು ಹೊರಟಿದ್ದರು.ಅದರ ಹಿಂದಿನ ದಿನ ಸ್ಟಾಪ್ ಪೇಪರ್ ತಂದು ನಕಲಿ ಕ್ರಯ ಮಾಡಿದರು. 9 ವರ್ಷದ ಬಾಲಕಿ ಕೂಡಿಹಾಕಿ ಆಸ್ತಿಯನ್ನು ಬರೆಸಿಕೊಂಡರು.ಬಾಲಕಿಯನ್ನ ಗಂಗಯ್ಯ ತಿಮ್ಮಯ್ಯ ಎಂಬುವರ ಮನೆ ಪಕ್ಕದಲ್ಲಿಟ್ಟಿದ್ದರು.ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ 9 ದಿನ ಕೂಡಿ ಹಾಕಿದ್ದರು.ನಿನ್ನ ಮಗಳು ಬೇಕು ಎಂದರೆ ಆಸ್ತಿ ಬರೆದುಕೊಡು ಬಾಲಕಿ ತಾಯಿಯನ್ನು ಬೆದರಿಸಿ ಆಸ್ತಿ ಬರೆಸಿಕೊಂಡಿದ್ದರು.ಎಲ್ಲಾ ದಾಖಲೆಗಳು ನನ್ನ ಬಳಿ ಇವೆ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ದೇವೇಗೌಡ ಇದೀಗ ಗಂಭೀರ ಆರೋಪ ಮಾಡಿದ್ದಾರೆ.
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…
ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ…
ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ…
ಕಳೆದ ವಾರ ಕೊಚ್ಚಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಲೆ ಮತ್ತು ಸಾಹಿತ್ಯ ಉತ್ಸವದಲ್ಲಿ ಸಿನಿಮಾ ಕುರಿತಂತೆ ಪ್ರಮುಖರು ಆಡಿರುವ…