ರಾಜಕೀಯ

ʼಡಿಕೆಶಿʼ ವಿರುದ್ಧ ʼಹೆಚ್‌ಡಿಡಿʼ ಗಂಭೀರ ಆರೋಪ !

ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕೂಡ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು,9 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಕೂಡಿ ಹಾಕಿ ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ಗಂಭಿರ ಆರೋಪ ಮಾಡಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ದೇವೇಗೌಡರು ಡಿಸೈನ್ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಗಂಭೀರ ಆರೋಪ ಮಾಡಿದರು. 9 ವರ್ಷದ ಬಾಲಕಿಯನ್ನ ಕರೆದೋಯ್ದು ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ.ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಮುಖಭಂಗವಾಗುತ್ತದೆ. ಅಮೇರಿಕಾದಿಂದ ಹಣ ತಂದಿದ್ದ ವ್ಯಕ್ತಿಗೆ ಆಸ್ತಿ ಬರೆಸಿದರು ಎಂದು ಗಂಭಿರ ಆರೋಪ ಮಾಡಿದರು.

ಅವರು ಐಟಿ ಕಂಪನಿ ಸ್ಥಾಪನೆ ಮಾಡಲು ಹೊರಟಿದ್ದರು.ಅದರ ಹಿಂದಿನ ದಿನ ಸ್ಟಾಪ್ ಪೇಪರ್ ತಂದು ನಕಲಿ ಕ್ರಯ ಮಾಡಿದರು. 9 ವರ್ಷದ ಬಾಲಕಿ ಕೂಡಿಹಾಕಿ ಆಸ್ತಿಯನ್ನು ಬರೆಸಿಕೊಂಡರು.ಬಾಲಕಿಯನ್ನ ಗಂಗಯ್ಯ ತಿಮ್ಮಯ್ಯ ಎಂಬುವರ ಮನೆ ಪಕ್ಕದಲ್ಲಿಟ್ಟಿದ್ದರು.ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ 9 ದಿನ ಕೂಡಿ ಹಾಕಿದ್ದರು.ನಿನ್ನ ಮಗಳು ಬೇಕು ಎಂದರೆ ಆಸ್ತಿ ಬರೆದುಕೊಡು ಬಾಲಕಿ ತಾಯಿಯನ್ನು ಬೆದರಿಸಿ ಆಸ್ತಿ ಬರೆಸಿಕೊಂಡಿದ್ದರು.ಎಲ್ಲಾ ದಾಖಲೆಗಳು ನನ್ನ ಬಳಿ ಇವೆ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ದೇವೇಗೌಡ ಇದೀಗ ಗಂಭೀರ ಆರೋಪ ಮಾಡಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago