ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕೂಡ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು,9 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ, ಕೂಡಿ ಹಾಕಿ ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ ಎಂದು ಗಂಭಿರ ಆರೋಪ ಮಾಡಿದರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ದೇವೇಗೌಡರು ಡಿಸೈನ್ ಡಿಕೆ ಶಿವಕುಮಾರ್ ವಿರುದ್ಧ ಈ ರೀತಿ ಗಂಭೀರ ಆರೋಪ ಮಾಡಿದರು. 9 ವರ್ಷದ ಬಾಲಕಿಯನ್ನ ಕರೆದೋಯ್ದು ಆಸ್ತಿ ಬರೆಸಿಕೊಂಡಿದ್ದಾರೆ.ನನ್ನ ಬಳಿ ಎಲ್ಲಾ ದಾಖಲೆಗಳಿವೆ.ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಮುಖಭಂಗವಾಗುತ್ತದೆ. ಅಮೇರಿಕಾದಿಂದ ಹಣ ತಂದಿದ್ದ ವ್ಯಕ್ತಿಗೆ ಆಸ್ತಿ ಬರೆಸಿದರು ಎಂದು ಗಂಭಿರ ಆರೋಪ ಮಾಡಿದರು.
ಅವರು ಐಟಿ ಕಂಪನಿ ಸ್ಥಾಪನೆ ಮಾಡಲು ಹೊರಟಿದ್ದರು.ಅದರ ಹಿಂದಿನ ದಿನ ಸ್ಟಾಪ್ ಪೇಪರ್ ತಂದು ನಕಲಿ ಕ್ರಯ ಮಾಡಿದರು. 9 ವರ್ಷದ ಬಾಲಕಿ ಕೂಡಿಹಾಕಿ ಆಸ್ತಿಯನ್ನು ಬರೆಸಿಕೊಂಡರು.ಬಾಲಕಿಯನ್ನ ಗಂಗಯ್ಯ ತಿಮ್ಮಯ್ಯ ಎಂಬುವರ ಮನೆ ಪಕ್ಕದಲ್ಲಿಟ್ಟಿದ್ದರು.ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿ 9 ದಿನ ಕೂಡಿ ಹಾಕಿದ್ದರು.ನಿನ್ನ ಮಗಳು ಬೇಕು ಎಂದರೆ ಆಸ್ತಿ ಬರೆದುಕೊಡು ಬಾಲಕಿ ತಾಯಿಯನ್ನು ಬೆದರಿಸಿ ಆಸ್ತಿ ಬರೆಸಿಕೊಂಡಿದ್ದರು.ಎಲ್ಲಾ ದಾಖಲೆಗಳು ನನ್ನ ಬಳಿ ಇವೆ ಡಿಕೆ ಶಿವಕುಮಾರ್ ವಿರುದ್ಧ ಎಚ್ಡಿ ದೇವೇಗೌಡ ಇದೀಗ ಗಂಭೀರ ಆರೋಪ ಮಾಡಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…