ಬೆಂಗಳೂರು : ವಿರೋಧಿಗಳಿಗೆ ಶಕ್ತಿ ಯೋಜನೆ ಯಶಸ್ಸು ತಕ್ಕ ಉತ್ತರ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಯೋಜನೆಯ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಡಿಕೆ ಶಿವಕುಮಾರ್, ಶಕ್ತಿ ಯೋಜನೆಯಡಿಯಲ್ಲಿ ಈವರೆಗೆ 100.47 ಕೋಟಿ ಮಹಿಳೆಯರು ಪ್ರಯಾಣ ಮಾಡಿ ಯೋಜನೆಯನ್ನು ಯಶಸ್ವಿಗೊಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆಯನ್ನು ವಿರೋಧಿಸಿದ್ದ ಸಿಕ್ಕಿದೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಶತಕೋಟಿ ದಾಟಿರುವುದು ಪ್ರಶಂಸನೀಯ. ಯೋಜನೆ ಆರಂಭವಾದಾಗಿನಿಂದ ಈವರೆಗೆ 100.47 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ. ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿರುವುದು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ.
ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದವು ಆದರೆ ಅದೆಲ್ಲದಕ್ಕೂ ಶಕ್ತಿ ಯೋಜನೆ ತಕ್ಕ ಉತ್ತರ ನೀಡಿದೆ. ದುಡಿಯುವ ವರ್ಗದ ಮಹಿಳೆಯರಿಗೆ ಇದು ಹೆಚ್ಚು ಸಹಕಾರಿಯದ ಯೋಜನೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದಿದ್ದಾರೆ.
ಶಕ್ತಿ ಯೋಜನೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಗಳಲ್ಲಿ ಒಂದಾಗಿದೆ. ಇದು ದುಡಿಯುವ ಹಾಗೂ ಬಡವರ್ಗದ ಮಹಿಳೆಯರಿಗೆ ಸಹಕಾರಿಯಾಗಿದೆ. ಶಕ್ತಿ ಯೋಜನೆ ಜಾರಿಯಾದಗಿನಿಂದ ಕೆಎಸ್ ಆರ್ ಟಿ ಸಿ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಯೋಜನೆ ಜನಪರ ಮೆಚ್ಚುಗೆ ವ್ಯಕ್ತವಾದ ಯೋಜನೆ ಎಂಬ ಹೆಗ್ಗಳಿಕೆ ಹೊಂದಿದೆ. ಇನ್ನು ಈ ಯೋಜನೆ ಅಡಿಯಲ್ಲಿ ಮಹಿಳೆಯರು ಅತಿ ಹೆಚ್ಚಾಗಿ ತೀರ್ಥಕ್ಷೇತ್ರಗಳಿಗೆ ಪ್ರಯಾಣ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ.
ಪ್ರತಿಪಕ್ಷಗಳು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ತೀವ್ರವಾಗಿ ಟೀಕಿಸಿದ್ದವು. ರಾಜ್ಯ ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಕಿಡಿ ಕಾರಿದ್ದವು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…