ರಾಜಕೀಯ

ಪ್ರತಾಪ್‌ ಸಿಂಹ ಮುಗಿಸಲು ಹೊರಟ ಟರ್ಮಿನೇಟರ್‌ ಸಿನಿಮಾಗೆ ಸಿದ್ದರಾಮಣ್ಣನೇ ನಿರ್ದೇಶಕ: ಹೆಚ್‌ಡಿಕೆ

ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಇತ್ತೀಚೆಗಷ್ಟೆ ಅರಣ್ಯ ಇಲಾಖೆ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿತ್ತು. ಎಫ್‌ಐಆರ್‌ ಪ್ರತಿಯಲ್ಲಿ ತಮ್ಮ ಸೋದರನ ಹೆಸರಿಲ್ಲದಿದ್ದರೂ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಅಲ್ಲದೇ ಸುದ್ದಿಗೋಷ್ಠಿ ನಡೆಸಿದ್ದ ಜೆಡಿಎಸ್‌ನ ಕುಮಾರಸ್ವಾಮಿ ಸಹ ಇದನ್ನೇ ಹೇಳಿದ್ದರು. ಇದರ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂದು ಆರೋಪಿಸಿದ್ದರು. ಹೆಚ್‌ಡಿಕೆ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಮುಖಂಡರು ಪ್ರತಿಕ್ರಿಯೆ ನೀಡಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಹೆಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ತನ್ನ ಬಗ್ಗೆ ಪ್ರತಿಕ್ರಿಯಿಸಿದವರ ವಿರುದ್ಧ ಖಾರವಾಗಿ ಬರೆದುಕೊಂಡಿದ್ದಾರೆ ಹಾಗೂ ವಿಕ್ರಂ ಸಿಂಹ ಬಂಧನವೆಲ್ಲಾ ಸಿದ್ದರಾಮಯ್ಯ ಬರೆದ ಕಥೆ ಎಂದು ವ್ಯಂಗ್ಯವಾಡಿದ್ದಾರೆ.

ತನ್ನ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌ ಹಾಗೂ ಕೆ ಎನ್‌ ರಾಜಣ್ಣ ಸಚಿವಗಿರಿ ಎಂದರೆ ಚಮಚಗಿರಿ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗೆ ಇಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ತಾನು ಸುದ್ದಿಗೋಷ್ಠಿಯಲ್ಲಿ ಹೇಳಿದ್ದೆಲ್ಲವೂ ಸತ್ಯ, ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ, ಆ ದಾಖಲೆಯನ್ನು ಎಲ್ಲಿಗೆ ತರಲಿ ಎಂದು ಬಹಿರಂಗ ಚರ್ಚೆಗೂ ಆಹ್ವಾನಿಸಿದ್ದಾರೆ.

ಕೊನೆಗೆ “ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ” ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

andolana

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

1 hour ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

2 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

2 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

3 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

3 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

3 hours ago