ರಾಜಕೀಯ

ಪ್ರತಾಪ್‌ ಸಿಂಹ ಮುಗಿಸಲು ಹೊರಟ ಟರ್ಮಿನೇಟರ್‌ ಸಿನಿಮಾಗೆ ಸಿದ್ದರಾಮಣ್ಣನೇ ನಿರ್ದೇಶಕ: ಹೆಚ್‌ಡಿಕೆ

ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಇತ್ತೀಚೆಗಷ್ಟೆ ಅರಣ್ಯ ಇಲಾಖೆ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿತ್ತು. ಎಫ್‌ಐಆರ್‌ ಪ್ರತಿಯಲ್ಲಿ ತಮ್ಮ ಸೋದರನ ಹೆಸರಿಲ್ಲದಿದ್ದರೂ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಅಲ್ಲದೇ ಸುದ್ದಿಗೋಷ್ಠಿ ನಡೆಸಿದ್ದ ಜೆಡಿಎಸ್‌ನ ಕುಮಾರಸ್ವಾಮಿ ಸಹ ಇದನ್ನೇ ಹೇಳಿದ್ದರು. ಇದರ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂದು ಆರೋಪಿಸಿದ್ದರು. ಹೆಚ್‌ಡಿಕೆ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಮುಖಂಡರು ಪ್ರತಿಕ್ರಿಯೆ ನೀಡಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಹೆಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ತನ್ನ ಬಗ್ಗೆ ಪ್ರತಿಕ್ರಿಯಿಸಿದವರ ವಿರುದ್ಧ ಖಾರವಾಗಿ ಬರೆದುಕೊಂಡಿದ್ದಾರೆ ಹಾಗೂ ವಿಕ್ರಂ ಸಿಂಹ ಬಂಧನವೆಲ್ಲಾ ಸಿದ್ದರಾಮಯ್ಯ ಬರೆದ ಕಥೆ ಎಂದು ವ್ಯಂಗ್ಯವಾಡಿದ್ದಾರೆ.

ತನ್ನ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌ ಹಾಗೂ ಕೆ ಎನ್‌ ರಾಜಣ್ಣ ಸಚಿವಗಿರಿ ಎಂದರೆ ಚಮಚಗಿರಿ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗೆ ಇಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ತಾನು ಸುದ್ದಿಗೋಷ್ಠಿಯಲ್ಲಿ ಹೇಳಿದ್ದೆಲ್ಲವೂ ಸತ್ಯ, ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ, ಆ ದಾಖಲೆಯನ್ನು ಎಲ್ಲಿಗೆ ತರಲಿ ಎಂದು ಬಹಿರಂಗ ಚರ್ಚೆಗೂ ಆಹ್ವಾನಿಸಿದ್ದಾರೆ.

ಕೊನೆಗೆ “ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ” ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

andolana

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

12 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

23 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

46 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

1 hour ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

3 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago