ರಾಜಕೀಯ

ಪ್ರತಾಪ್‌ ಸಿಂಹ ಮುಗಿಸಲು ಹೊರಟ ಟರ್ಮಿನೇಟರ್‌ ಸಿನಿಮಾಗೆ ಸಿದ್ದರಾಮಣ್ಣನೇ ನಿರ್ದೇಶಕ: ಹೆಚ್‌ಡಿಕೆ

ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಇತ್ತೀಚೆಗಷ್ಟೆ ಅರಣ್ಯ ಇಲಾಖೆ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿತ್ತು. ಎಫ್‌ಐಆರ್‌ ಪ್ರತಿಯಲ್ಲಿ ತಮ್ಮ ಸೋದರನ ಹೆಸರಿಲ್ಲದಿದ್ದರೂ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಅಲ್ಲದೇ ಸುದ್ದಿಗೋಷ್ಠಿ ನಡೆಸಿದ್ದ ಜೆಡಿಎಸ್‌ನ ಕುಮಾರಸ್ವಾಮಿ ಸಹ ಇದನ್ನೇ ಹೇಳಿದ್ದರು. ಇದರ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂದು ಆರೋಪಿಸಿದ್ದರು. ಹೆಚ್‌ಡಿಕೆ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಮುಖಂಡರು ಪ್ರತಿಕ್ರಿಯೆ ನೀಡಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಹೆಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ತನ್ನ ಬಗ್ಗೆ ಪ್ರತಿಕ್ರಿಯಿಸಿದವರ ವಿರುದ್ಧ ಖಾರವಾಗಿ ಬರೆದುಕೊಂಡಿದ್ದಾರೆ ಹಾಗೂ ವಿಕ್ರಂ ಸಿಂಹ ಬಂಧನವೆಲ್ಲಾ ಸಿದ್ದರಾಮಯ್ಯ ಬರೆದ ಕಥೆ ಎಂದು ವ್ಯಂಗ್ಯವಾಡಿದ್ದಾರೆ.

ತನ್ನ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌ ಹಾಗೂ ಕೆ ಎನ್‌ ರಾಜಣ್ಣ ಸಚಿವಗಿರಿ ಎಂದರೆ ಚಮಚಗಿರಿ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗೆ ಇಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ತಾನು ಸುದ್ದಿಗೋಷ್ಠಿಯಲ್ಲಿ ಹೇಳಿದ್ದೆಲ್ಲವೂ ಸತ್ಯ, ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ, ಆ ದಾಖಲೆಯನ್ನು ಎಲ್ಲಿಗೆ ತರಲಿ ಎಂದು ಬಹಿರಂಗ ಚರ್ಚೆಗೂ ಆಹ್ವಾನಿಸಿದ್ದಾರೆ.

ಕೊನೆಗೆ “ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ” ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago