ರಾಜಕೀಯ

ಪ್ರತಾಪ್‌ ಸಿಂಹ ಮುಗಿಸಲು ಹೊರಟ ಟರ್ಮಿನೇಟರ್‌ ಸಿನಿಮಾಗೆ ಸಿದ್ದರಾಮಣ್ಣನೇ ನಿರ್ದೇಶಕ: ಹೆಚ್‌ಡಿಕೆ

ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಇತ್ತೀಚೆಗಷ್ಟೆ ಅರಣ್ಯ ಇಲಾಖೆ ಮರ ಕಡಿದು ಸಾಗಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆದಿತ್ತು. ಎಫ್‌ಐಆರ್‌ ಪ್ರತಿಯಲ್ಲಿ ತಮ್ಮ ಸೋದರನ ಹೆಸರಿಲ್ಲದಿದ್ದರೂ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಅಲ್ಲದೇ ಸುದ್ದಿಗೋಷ್ಠಿ ನಡೆಸಿದ್ದ ಜೆಡಿಎಸ್‌ನ ಕುಮಾರಸ್ವಾಮಿ ಸಹ ಇದನ್ನೇ ಹೇಳಿದ್ದರು. ಇದರ ಹಿಂದೆ ಕಾಂಗ್ರೆಸ್‌ ಕೈವಾಡವಿದೆ ಎಂದು ಆರೋಪಿಸಿದ್ದರು. ಹೆಚ್‌ಡಿಕೆ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಮುಖಂಡರು ಪ್ರತಿಕ್ರಿಯೆ ನೀಡಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಹೆಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ತನ್ನ ಬಗ್ಗೆ ಪ್ರತಿಕ್ರಿಯಿಸಿದವರ ವಿರುದ್ಧ ಖಾರವಾಗಿ ಬರೆದುಕೊಂಡಿದ್ದಾರೆ ಹಾಗೂ ವಿಕ್ರಂ ಸಿಂಹ ಬಂಧನವೆಲ್ಲಾ ಸಿದ್ದರಾಮಯ್ಯ ಬರೆದ ಕಥೆ ಎಂದು ವ್ಯಂಗ್ಯವಾಡಿದ್ದಾರೆ.

ತನ್ನ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌ ಹಾಗೂ ಕೆ ಎನ್‌ ರಾಜಣ್ಣ ಸಚಿವಗಿರಿ ಎಂದರೆ ಚಮಚಗಿರಿ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು, ಸತ್ಯದ ಪರ ನಿಲ್ಲುವ ಗಂಡಸ್ತನ ನಿಮಗೆ ಇಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ ತಾನು ಸುದ್ದಿಗೋಷ್ಠಿಯಲ್ಲಿ ಹೇಳಿದ್ದೆಲ್ಲವೂ ಸತ್ಯ, ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ, ಆ ದಾಖಲೆಯನ್ನು ಎಲ್ಲಿಗೆ ತರಲಿ ಎಂದು ಬಹಿರಂಗ ಚರ್ಚೆಗೂ ಆಹ್ವಾನಿಸಿದ್ದಾರೆ.

ಕೊನೆಗೆ “ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನಿಮಾ ಇದು. ಅದರ ಹಿಂದಿರುವ ಸಿದ್ಧಸೂತ್ರದಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಒಬ್ಬರದೇ. ಅವರೇ ಶ್ರೀಮನ್ ಸಿದ್ದರಾಮಣ್ಣ” ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

andolana

Recent Posts

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

11 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

27 mins ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

1 hour ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

4 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

4 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

5 hours ago