Mysore
28
clear sky

Social Media

ಮಂಗಳವಾರ, 03 ಮಾರ್ಚ್ 2026
Light
Dark

ರಾಮಭಕ್ತ ಎಂದು ಬಿಂಬಿಸಿಕೊಳ್ಳುತ್ತಿರುವ ಶ್ರೀಕಾಂತ್‌ ಪೂಜಾರಿ ವಿರುದ್ಧ 16 ದೂರುಗಳಿವೆ: ಸಿದ್ದರಾಮಯ್ಯ ಟ್ವೀಟ್‌

ಶ್ರೀಕಾಂತ್‌ ಪೂಜಾರಿ ಬಂಧನ ಇದೀಗ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವಿನ ಕಿತ್ತಾಟವನ್ನು ಮತ್ತಷ್ಟು ಹೆಚ್ಚಿಸಿದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಗಲಭೆಗೆ ಸಂಬಂಧಿಸಿದಂತೆ ಶ್ರೀಕಾಂತ್‌ ಪೂಜಾರಿ ಬಂಧನಕ್ಕೊಳಗಾಗಿದ್ದು, ಇದೀಗ ಸಿದ್ದರಾಮಯ್ಯ 1991ರಿಂದ ಇಲ್ಲಿಯವರೆಗೆ ಶ್ರೀಕಾಂತ್‌ ಪೂಜಾರಿ ವಿರುದ್ಧ ದಾಖಲಾಗಿರುವ ದೂರುಗಳ ಪಟ್ಟಿಯನ್ನು ಟ್ವೀಟ್‌ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ ಹೀಗಿದೆ:
ಸಾರ್ವಜನಿಕರ ಮುಂದೆ ರಾಮಭಕ್ತ ಮತ್ತು ಕರಸೇವಕ ಎಂದು ಬಿಂಬಿಸಿಕೊಳ್ಳುವ ಶ್ರೀಕಾಂತ್ ಪೂಜಾರಿ ವಾಸ್ತವವಾಗಿ ಕಾನೂನಿನ ದೃಷ್ಟಿಯಲ್ಲಿ ಸಮಾಜ ಘಾತುಕ. ಆತತನ್ನ ಅಪರಾಧ ಚಟುವಟಿಕೆಗಳನ್ನು ರಕ್ಷಿಸಲು ಧರ್ಮವನ್ನು ಬಳಸುವವ. ಅಂತಹ ವ್ಯಕ್ತಿಗಳನ್ನು ಬಂಧಿಸದಿದ್ದರೆ ಮತ್ತು ಮುಕ್ತವಾಗಿ ತಿರುಗಾಡಲು ಬಿಟ್ಟರೆ ರಾಮ ಕೂಡ ಕ್ಷಮಿಸಲು ಸಾಧ್ಯವಿಲ್ಲ.

ಅಕ್ರಮ ಮದ್ಯ ಮಾರಾಟ, ಜೂಜು, ಮಟ್ಕಾ ಸೇರಿದಂತೆ 16 ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಆತನ ಎಲ್ಲಾ ಅಪರಾಧ ಕೃತ್ಯಗಳಿಗೆ ಬಹಿರಂಗವಾಗಿ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಬೇಕು ಅಥವಾ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.

2023 ರಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ಜೂಜಾಟ ಸೇರಿದಂತೆ ಅಪರಾಧಗಳಿಗೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದೆ. ಶ್ರೀಕಾಂತ್ ಪೂಜಾರಿ ಈ ಪಟ್ಟಿಯಲ್ಲಿ 32 ನೇ ವ್ಯಕ್ತಿಯಾಗಿದ್ದಾರೆ. ಕರಸೇವಕ ಎಂಬ ಕಾರಣಕ್ಕೆ ಆತನನ್ನು ಬಿಡುಗಡೆ ಮಾಡಬೇಕೇ ಅಥವಾ ಶಂಕಿತ ಆರೋಪಿ ಎಂದು ಬಂಧಿಸಬೇಕೇ? ಬಿಜೆಪಿಯ ಪ್ರತಿಭಟನೆ ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧವಾಗಿದೆ.

ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿರುವವರು ಧರ್ಮ ರಕ್ಷಕರೆಂದು ಹೇಳಿಕೊಂಡು ಕೊಲೆ, ಸುಲಿಗೆಯಲ್ಲಿ ತೊಡಗಿದರೆ ಬಿಜೆಪಿ ನಾಯಕರು ಬೆಂಬಲ ನೀಡುತ್ತಾರೆಯೇ?

ರಾಮಮಂದಿರ ಉದ್ಘಾಟನೆ ವೇಳೆ ಶ್ರೀಕಾಂತ್ ಪೂಜಾರಿ ಬಂಧನವಾಗಿದ್ದು ಕೇವಲ ಕಾಕತಾಳೀಯ. ಹಳೆಯ ಪ್ರಕರಣಗಳನ್ನು ಪರಿಶೀಲಿಸಿದಾಗ ಪೊಲೀಸರು ಆತನೊಂದಿಗೆ 36 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಸೇಡು ಅಥವಾ ಸಮಾಧಾನವೂ ಇಲ್ಲ. ಕಾನೂನನ್ನು ಜಾರಿಗೊಳಿಸಲಾಗಿದೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ. ಎಂದು ಬರೆದುಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!