ರಾಜಕೀಯ

ರಾಮಭಕ್ತ ಎಂದು ಬಿಂಬಿಸಿಕೊಳ್ಳುತ್ತಿರುವ ಶ್ರೀಕಾಂತ್‌ ಪೂಜಾರಿ ವಿರುದ್ಧ 16 ದೂರುಗಳಿವೆ: ಸಿದ್ದರಾಮಯ್ಯ ಟ್ವೀಟ್‌

ಶ್ರೀಕಾಂತ್‌ ಪೂಜಾರಿ ಬಂಧನ ಇದೀಗ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವಿನ ಕಿತ್ತಾಟವನ್ನು ಮತ್ತಷ್ಟು ಹೆಚ್ಚಿಸಿದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಗಲಭೆಗೆ ಸಂಬಂಧಿಸಿದಂತೆ ಶ್ರೀಕಾಂತ್‌ ಪೂಜಾರಿ ಬಂಧನಕ್ಕೊಳಗಾಗಿದ್ದು, ಇದೀಗ ಸಿದ್ದರಾಮಯ್ಯ 1991ರಿಂದ ಇಲ್ಲಿಯವರೆಗೆ ಶ್ರೀಕಾಂತ್‌ ಪೂಜಾರಿ ವಿರುದ್ಧ ದಾಖಲಾಗಿರುವ ದೂರುಗಳ ಪಟ್ಟಿಯನ್ನು ಟ್ವೀಟ್‌ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ ಹೀಗಿದೆ:
ಸಾರ್ವಜನಿಕರ ಮುಂದೆ ರಾಮಭಕ್ತ ಮತ್ತು ಕರಸೇವಕ ಎಂದು ಬಿಂಬಿಸಿಕೊಳ್ಳುವ ಶ್ರೀಕಾಂತ್ ಪೂಜಾರಿ ವಾಸ್ತವವಾಗಿ ಕಾನೂನಿನ ದೃಷ್ಟಿಯಲ್ಲಿ ಸಮಾಜ ಘಾತುಕ. ಆತತನ್ನ ಅಪರಾಧ ಚಟುವಟಿಕೆಗಳನ್ನು ರಕ್ಷಿಸಲು ಧರ್ಮವನ್ನು ಬಳಸುವವ. ಅಂತಹ ವ್ಯಕ್ತಿಗಳನ್ನು ಬಂಧಿಸದಿದ್ದರೆ ಮತ್ತು ಮುಕ್ತವಾಗಿ ತಿರುಗಾಡಲು ಬಿಟ್ಟರೆ ರಾಮ ಕೂಡ ಕ್ಷಮಿಸಲು ಸಾಧ್ಯವಿಲ್ಲ.

ಅಕ್ರಮ ಮದ್ಯ ಮಾರಾಟ, ಜೂಜು, ಮಟ್ಕಾ ಸೇರಿದಂತೆ 16 ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಆತನ ಎಲ್ಲಾ ಅಪರಾಧ ಕೃತ್ಯಗಳಿಗೆ ಬಹಿರಂಗವಾಗಿ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಬೇಕು ಅಥವಾ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.

2023 ರಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ಜೂಜಾಟ ಸೇರಿದಂತೆ ಅಪರಾಧಗಳಿಗೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದೆ. ಶ್ರೀಕಾಂತ್ ಪೂಜಾರಿ ಈ ಪಟ್ಟಿಯಲ್ಲಿ 32 ನೇ ವ್ಯಕ್ತಿಯಾಗಿದ್ದಾರೆ. ಕರಸೇವಕ ಎಂಬ ಕಾರಣಕ್ಕೆ ಆತನನ್ನು ಬಿಡುಗಡೆ ಮಾಡಬೇಕೇ ಅಥವಾ ಶಂಕಿತ ಆರೋಪಿ ಎಂದು ಬಂಧಿಸಬೇಕೇ? ಬಿಜೆಪಿಯ ಪ್ರತಿಭಟನೆ ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧವಾಗಿದೆ.

ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿರುವವರು ಧರ್ಮ ರಕ್ಷಕರೆಂದು ಹೇಳಿಕೊಂಡು ಕೊಲೆ, ಸುಲಿಗೆಯಲ್ಲಿ ತೊಡಗಿದರೆ ಬಿಜೆಪಿ ನಾಯಕರು ಬೆಂಬಲ ನೀಡುತ್ತಾರೆಯೇ?

ರಾಮಮಂದಿರ ಉದ್ಘಾಟನೆ ವೇಳೆ ಶ್ರೀಕಾಂತ್ ಪೂಜಾರಿ ಬಂಧನವಾಗಿದ್ದು ಕೇವಲ ಕಾಕತಾಳೀಯ. ಹಳೆಯ ಪ್ರಕರಣಗಳನ್ನು ಪರಿಶೀಲಿಸಿದಾಗ ಪೊಲೀಸರು ಆತನೊಂದಿಗೆ 36 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಸೇಡು ಅಥವಾ ಸಮಾಧಾನವೂ ಇಲ್ಲ. ಕಾನೂನನ್ನು ಜಾರಿಗೊಳಿಸಲಾಗಿದೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ. ಎಂದು ಬರೆದುಕೊಂಡಿದ್ದಾರೆ.

andolana

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

6 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

10 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago