ರಾಜಕೀಯ

ರಾಮಭಕ್ತ ಎಂದು ಬಿಂಬಿಸಿಕೊಳ್ಳುತ್ತಿರುವ ಶ್ರೀಕಾಂತ್‌ ಪೂಜಾರಿ ವಿರುದ್ಧ 16 ದೂರುಗಳಿವೆ: ಸಿದ್ದರಾಮಯ್ಯ ಟ್ವೀಟ್‌

ಶ್ರೀಕಾಂತ್‌ ಪೂಜಾರಿ ಬಂಧನ ಇದೀಗ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವಿನ ಕಿತ್ತಾಟವನ್ನು ಮತ್ತಷ್ಟು ಹೆಚ್ಚಿಸಿದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಗಲಭೆಗೆ ಸಂಬಂಧಿಸಿದಂತೆ ಶ್ರೀಕಾಂತ್‌ ಪೂಜಾರಿ ಬಂಧನಕ್ಕೊಳಗಾಗಿದ್ದು, ಇದೀಗ ಸಿದ್ದರಾಮಯ್ಯ 1991ರಿಂದ ಇಲ್ಲಿಯವರೆಗೆ ಶ್ರೀಕಾಂತ್‌ ಪೂಜಾರಿ ವಿರುದ್ಧ ದಾಖಲಾಗಿರುವ ದೂರುಗಳ ಪಟ್ಟಿಯನ್ನು ಟ್ವೀಟ್‌ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಮಾಡಿರುವ ಟ್ವೀಟ್‌ ಹೀಗಿದೆ:
ಸಾರ್ವಜನಿಕರ ಮುಂದೆ ರಾಮಭಕ್ತ ಮತ್ತು ಕರಸೇವಕ ಎಂದು ಬಿಂಬಿಸಿಕೊಳ್ಳುವ ಶ್ರೀಕಾಂತ್ ಪೂಜಾರಿ ವಾಸ್ತವವಾಗಿ ಕಾನೂನಿನ ದೃಷ್ಟಿಯಲ್ಲಿ ಸಮಾಜ ಘಾತುಕ. ಆತತನ್ನ ಅಪರಾಧ ಚಟುವಟಿಕೆಗಳನ್ನು ರಕ್ಷಿಸಲು ಧರ್ಮವನ್ನು ಬಳಸುವವ. ಅಂತಹ ವ್ಯಕ್ತಿಗಳನ್ನು ಬಂಧಿಸದಿದ್ದರೆ ಮತ್ತು ಮುಕ್ತವಾಗಿ ತಿರುಗಾಡಲು ಬಿಟ್ಟರೆ ರಾಮ ಕೂಡ ಕ್ಷಮಿಸಲು ಸಾಧ್ಯವಿಲ್ಲ.

ಅಕ್ರಮ ಮದ್ಯ ಮಾರಾಟ, ಜೂಜು, ಮಟ್ಕಾ ಸೇರಿದಂತೆ 16 ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಆತನ ಎಲ್ಲಾ ಅಪರಾಧ ಕೃತ್ಯಗಳಿಗೆ ಬಹಿರಂಗವಾಗಿ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಬೇಕು ಅಥವಾ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.

2023 ರಲ್ಲಿ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ಜೂಜಾಟ ಸೇರಿದಂತೆ ಅಪರಾಧಗಳಿಗೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದೆ. ಶ್ರೀಕಾಂತ್ ಪೂಜಾರಿ ಈ ಪಟ್ಟಿಯಲ್ಲಿ 32 ನೇ ವ್ಯಕ್ತಿಯಾಗಿದ್ದಾರೆ. ಕರಸೇವಕ ಎಂಬ ಕಾರಣಕ್ಕೆ ಆತನನ್ನು ಬಿಡುಗಡೆ ಮಾಡಬೇಕೇ ಅಥವಾ ಶಂಕಿತ ಆರೋಪಿ ಎಂದು ಬಂಧಿಸಬೇಕೇ? ಬಿಜೆಪಿಯ ಪ್ರತಿಭಟನೆ ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧವಾಗಿದೆ.

ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿರುವವರು ಧರ್ಮ ರಕ್ಷಕರೆಂದು ಹೇಳಿಕೊಂಡು ಕೊಲೆ, ಸುಲಿಗೆಯಲ್ಲಿ ತೊಡಗಿದರೆ ಬಿಜೆಪಿ ನಾಯಕರು ಬೆಂಬಲ ನೀಡುತ್ತಾರೆಯೇ?

ರಾಮಮಂದಿರ ಉದ್ಘಾಟನೆ ವೇಳೆ ಶ್ರೀಕಾಂತ್ ಪೂಜಾರಿ ಬಂಧನವಾಗಿದ್ದು ಕೇವಲ ಕಾಕತಾಳೀಯ. ಹಳೆಯ ಪ್ರಕರಣಗಳನ್ನು ಪರಿಶೀಲಿಸಿದಾಗ ಪೊಲೀಸರು ಆತನೊಂದಿಗೆ 36 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಸೇಡು ಅಥವಾ ಸಮಾಧಾನವೂ ಇಲ್ಲ. ಕಾನೂನನ್ನು ಜಾರಿಗೊಳಿಸಲಾಗಿದೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ. ಎಂದು ಬರೆದುಕೊಂಡಿದ್ದಾರೆ.

andolana

Recent Posts

ಓದುಗರ ಪತ್ರ: ಮಾದರಿಯ ನಡೆ!

ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…

4 mins ago

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

6 mins ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

8 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

10 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago