ರಾಜಕೀಯ

ಸಂಸದೆ ಸುಮಲತಾ ಸಮಾಧಾನದಿಂದ ಇರಬೇಕು, ಒಳ್ಳೆ ಸ್ಥಾನಮಾನ ದೊರೆಯಲಿದೆ: ಬಿಎಸ್‌ ಯಡಿಯೂರಪ್ಪ

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ದೊರೆತ ಬಳಿಕ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತದೆ. ಸುಮಲತಾ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ಬೆಳಗಾವಿಯಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ಲಿಸುವ ಸಂಬಂಧ ಸಭೆ ಮಾಡಿದ್ದೇವೆ. ಎಲ್ಲರೂ ಒಂದಾಗಿ ಶೆಟ್ಟರ್‌ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ರಾಜ್ಯದ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಎಲ್ಲಿಯೂ ಅಸಮಾಧಾನ ಇಲ್ಲ. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪ್ರಚಾರಕ್ಕಾಗಿ ಎಲ್ಲಾ ಸ್ಥಳಗಳಿಗೆ ತೆರಳಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಜಗದೀಶ್‌ ಶೆಟ್ಟರ್‌ ಅವರು ಒಳ್ಳೆಯ ನಾಯಕ, ಆದ್ದರಿಂದ ನಾವು ಅವರನ್ನು ಒತ್ತಾಯಿಸಿ ವಾಪಸ್‌ ಬಿಜೆಪಿಗೆ ಕರೆಸಿಕೊಂಡಿದ್ದೇವೆ. ಇದೀಗ ಅವರು ತುಂಬಾ ಉತ್ಸುಕತೆಯಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದು, ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಿದ್ದೇವೆ. ಬೆಳಗಾವಿಯ ಎರಡು ಕ್ಷೇತ್ರಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರವನ್ನು ಟೀಕಿಸುವ ಸಿದ್ದರಾಮಯ್ಯ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಪ್ರಧಾನಿ ಟೀಕಿಸುವ ಮೂಲಕ ಸಿದ್ದರಾಮಯ್ಯ ದೊಡ್ಡ ನಾಯಕರಾಗುತ್ತಾರೆ ಎಂದು ಯೋಚಿಸುತ್ತಿರಬಹುದು. ಕೇಂದ್ರದಿಂದ ಕರ್ನಾಟಕಕ್ಕೆ ಬರಬೇಕಿದ್ದ ಬರ ಪರಿಹಾರ ಹಣ ಬಂದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿದ ನಂತರವೂ ಅವರು ಕೇಂದ್ರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

andolana

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

15 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

16 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

20 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago