ರಾಜಕೀಯ

ಕನ್ನಡಿಗರ ಪರ ಧ್ವನಿ ಎತ್ತದ ತೇಜಸ್ವಿಗೆ ಮತ ಕೇಳುವ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಪರವಾಗಿ‌ ಬಿರುಸಿನ ರೋಡ್‌ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ಹೊರಹಾಕಿದರು.

ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತದ ತೇಜಸ್ವಿ ಸೂರ್ಯ, ಯಾವ ಮುಖ ಇಟ್ಕೊಂಡು ಮತ ಕೇಳುತ್ತಿದ್ದಾರೆ. ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆ ಆಗಬೇಕು. ಕೇಂದ್ರದಲ್ಲಿ ಮೇಕುದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸೌಮ್ಯರೆಡ್ಡಿ ಗೆದ್ದರೆ ನಾನು ಗೆದ್ದಂತೆ. ಭಾವನಾತ್ಮಕವಾಗಿ ಕೇರಳಿ ಮತ ಹಾಕಿಸಿಕೊಂಡು ವಂಚಿಸುವವರು ನಾವಲ್ಲ. ನಿಮ್ಮ ಭಾವನೆಗಳನ್ನು ಗೌರವಿಸಿ, ಬದುಕಿನ ಸಂಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದ್ದೇವೆ. ಭಾವನೆಗಳನ್ನು ಕೆರಳಿಸುವವರನ್ನು ದೂರವಿಡಿ. ಭಾವನಾತ್ಮಕವಾಗಿ ಕೆರಳಿ ಮತ ಹಾಕಿದಕ್ಕೆ ಹತ್ತು ವರ್ಷದಲ್ಲಿ ದೇಶಕ್ಕೆ ಮತ್ತು ನಿಮಗೆ ಸಿಕ್ಕಿದ್ದೇನೆ ಎಂದು ಪ್ರಶ್ನಿಸಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago