ರಾಜಕೀಯ

ಕ್ವಿಟ್ ಇಂಡಿಯ ಘೋಷ ವಾಕ್ಯದ ಮೂಲಕ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾದ ಬಿಜೆಪಿ

ನವದೆಹಲಿ : ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಪರ್ಯಾಯವಾಗಿ ರಚನೆಯಾಗಿರುವ ಇಂಡಿಯ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ, ಕ್ವಿಟ್ ಇಂಡಿಯ( ಭಾರತ ಬಿಟ್ಟು ತೊಲಗಿ) ಎಂಬ ಘೋಷ ವಾಕ್ಯವನ್ನು ಮುನ್ನಲೆಗೆ ತಂದಿದೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಮೈತ್ರಿಕೂಟವು ಯುಪಿಎ ಬದಲಿಗೆ ಜನರ ಭಾವನೆಯನ್ನು ಸೆಳೆಯಲು ಇಂಡಿಯಾ ಎಂಬ ಮರುನಾಮಕರಣದೊಂದಿಗೆ ಮೈತ್ರಿಕೂಟವನ್ನು ರಚಿಸಿಕೊಂಡಿತು.
ಇದೀಗ ಇಂಡಿಯ ಮೈತ್ರಿಕೂಟಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಕ್ವಿಟ್ ಇಂಡಿಯ ಎಂಬ ಅಭಿಯಾನವನ್ನು ಲೋಕಸಭೆ ಚುನಾವಣೆಯಲ್ಲಿ ಆರಂಭಿಸಲು ಮುಂದಾಗಿದ್ದು, ಬಹುತೇಕ ಇದೇ ಘೋಷವಾಕ್ಯ ಪ್ರಚಾರದ ಮುನ್ನಲೆಗೆ ಬರಲಿದೆ.

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬರುವ ಮುನ್ನ ಬ್ರಿಟಿಷರ ವಿರುದ್ಧ ಹೋರಾಟ ನಡೆಸಲು ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರು ಅಂತಿಮ ಅಸ್ತ್ರವಾಗಿ ಕ್ವಿಟ್ ಇಂಡಿಯ ಚಳುವಳಿಗೆ ಕರೆಕೊಟ್ಟಿದ್ದರು.
ಇದರ ಪರಿಣಾಮ ಭಾರತೀಯರೆಲ್ಲರೂ ತಮ್ಮ ವೈಮನಸ್ಸು, ಭಿನ್ನಾಭಿಪ್ರಾಯ, ಜಾತಿ, ಧರ್ಮ ಮರೆತು ಬ್ರಿಟಿಷರ ವಿರುದ್ಧ ಒಂದಾಗಿ ದೇಶದ ಸ್ವತಂತ್ರಕ್ಕಾಗಿ ಧುಮುಕಿದ್ದರು.

ಈಗ ಇದೇ ಅಸ್ತ್ರವನ್ನು ಪ್ರತಿಪಕ್ಷಗಳ ವಿರುದ್ಧ ಬಳಸಲು ಮುಂದಾಗಿರುವ ಬಿಜೆಪಿ ಇಂಡಿಯಾಗೆ ಪರ್ಯಾಯವಾಗಿ ಕ್ವಿಟ್ ಇಂಡಿಯ ಅಭಿಯಾನವನ್ನು ದೇಶಾದ್ಯಂತ ನಡೆಸಿ ಮತದಾರರನ್ನು ತನ್ನತ್ತ ಸೆಳೆಯಲು ರಣತಂತ್ರ ರೂಪಿಸಿದೆ.

ಪ್ರಧಾನಿ ನರೇಂದ್ರಮೋದಿ ಅವರು ಕ್ವಿಟ್ ಇಂಡಿಯ ಚಳುವಳಿ ಸ್ಮರಣಾರ್ಥ ಮಾತನಾಡಿ, ಭ್ರಷ್ಟಾಚಾರ, ವಂಶ ಪಾರಂಪರ್ಯ ಹಾಗೂ ತುಷ್ಟೀಕರಣ ನಡೆಸುತ್ತಿರುವ ಇಂಡಿಯ ಮೈತ್ರಿಕೂಟವನ್ನು ಕ್ವಿಟ್ ಇಂಡಿಯಾದ ಮೂಲಕ ಪರಾಭವಗೊಳಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.

lokesh

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

6 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

16 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

40 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

58 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago