ರಾಜಕೀಯ

ಕ್ವಿಟ್ ಇಂಡಿಯ ಘೋಷ ವಾಕ್ಯದ ಮೂಲಕ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾದ ಬಿಜೆಪಿ

ನವದೆಹಲಿ : ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಪರ್ಯಾಯವಾಗಿ ರಚನೆಯಾಗಿರುವ ಇಂಡಿಯ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ, ಕ್ವಿಟ್ ಇಂಡಿಯ( ಭಾರತ ಬಿಟ್ಟು ತೊಲಗಿ) ಎಂಬ ಘೋಷ ವಾಕ್ಯವನ್ನು ಮುನ್ನಲೆಗೆ ತಂದಿದೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಮೈತ್ರಿಕೂಟವು ಯುಪಿಎ ಬದಲಿಗೆ ಜನರ ಭಾವನೆಯನ್ನು ಸೆಳೆಯಲು ಇಂಡಿಯಾ ಎಂಬ ಮರುನಾಮಕರಣದೊಂದಿಗೆ ಮೈತ್ರಿಕೂಟವನ್ನು ರಚಿಸಿಕೊಂಡಿತು.
ಇದೀಗ ಇಂಡಿಯ ಮೈತ್ರಿಕೂಟಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಕ್ವಿಟ್ ಇಂಡಿಯ ಎಂಬ ಅಭಿಯಾನವನ್ನು ಲೋಕಸಭೆ ಚುನಾವಣೆಯಲ್ಲಿ ಆರಂಭಿಸಲು ಮುಂದಾಗಿದ್ದು, ಬಹುತೇಕ ಇದೇ ಘೋಷವಾಕ್ಯ ಪ್ರಚಾರದ ಮುನ್ನಲೆಗೆ ಬರಲಿದೆ.

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬರುವ ಮುನ್ನ ಬ್ರಿಟಿಷರ ವಿರುದ್ಧ ಹೋರಾಟ ನಡೆಸಲು ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರು ಅಂತಿಮ ಅಸ್ತ್ರವಾಗಿ ಕ್ವಿಟ್ ಇಂಡಿಯ ಚಳುವಳಿಗೆ ಕರೆಕೊಟ್ಟಿದ್ದರು.
ಇದರ ಪರಿಣಾಮ ಭಾರತೀಯರೆಲ್ಲರೂ ತಮ್ಮ ವೈಮನಸ್ಸು, ಭಿನ್ನಾಭಿಪ್ರಾಯ, ಜಾತಿ, ಧರ್ಮ ಮರೆತು ಬ್ರಿಟಿಷರ ವಿರುದ್ಧ ಒಂದಾಗಿ ದೇಶದ ಸ್ವತಂತ್ರಕ್ಕಾಗಿ ಧುಮುಕಿದ್ದರು.

ಈಗ ಇದೇ ಅಸ್ತ್ರವನ್ನು ಪ್ರತಿಪಕ್ಷಗಳ ವಿರುದ್ಧ ಬಳಸಲು ಮುಂದಾಗಿರುವ ಬಿಜೆಪಿ ಇಂಡಿಯಾಗೆ ಪರ್ಯಾಯವಾಗಿ ಕ್ವಿಟ್ ಇಂಡಿಯ ಅಭಿಯಾನವನ್ನು ದೇಶಾದ್ಯಂತ ನಡೆಸಿ ಮತದಾರರನ್ನು ತನ್ನತ್ತ ಸೆಳೆಯಲು ರಣತಂತ್ರ ರೂಪಿಸಿದೆ.

ಪ್ರಧಾನಿ ನರೇಂದ್ರಮೋದಿ ಅವರು ಕ್ವಿಟ್ ಇಂಡಿಯ ಚಳುವಳಿ ಸ್ಮರಣಾರ್ಥ ಮಾತನಾಡಿ, ಭ್ರಷ್ಟಾಚಾರ, ವಂಶ ಪಾರಂಪರ್ಯ ಹಾಗೂ ತುಷ್ಟೀಕರಣ ನಡೆಸುತ್ತಿರುವ ಇಂಡಿಯ ಮೈತ್ರಿಕೂಟವನ್ನು ಕ್ವಿಟ್ ಇಂಡಿಯಾದ ಮೂಲಕ ಪರಾಭವಗೊಳಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 mins ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

18 mins ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 mins ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

23 mins ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

34 mins ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

38 mins ago