ರಾಜಕೀಯ

ಕ್ವಿಟ್ ಇಂಡಿಯ ಘೋಷ ವಾಕ್ಯದ ಮೂಲಕ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾದ ಬಿಜೆಪಿ

ನವದೆಹಲಿ : ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಪರ್ಯಾಯವಾಗಿ ರಚನೆಯಾಗಿರುವ ಇಂಡಿಯ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ, ಕ್ವಿಟ್ ಇಂಡಿಯ( ಭಾರತ ಬಿಟ್ಟು ತೊಲಗಿ) ಎಂಬ ಘೋಷ ವಾಕ್ಯವನ್ನು ಮುನ್ನಲೆಗೆ ತಂದಿದೆ.

ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಮೈತ್ರಿಕೂಟವು ಯುಪಿಎ ಬದಲಿಗೆ ಜನರ ಭಾವನೆಯನ್ನು ಸೆಳೆಯಲು ಇಂಡಿಯಾ ಎಂಬ ಮರುನಾಮಕರಣದೊಂದಿಗೆ ಮೈತ್ರಿಕೂಟವನ್ನು ರಚಿಸಿಕೊಂಡಿತು.
ಇದೀಗ ಇಂಡಿಯ ಮೈತ್ರಿಕೂಟಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಕ್ವಿಟ್ ಇಂಡಿಯ ಎಂಬ ಅಭಿಯಾನವನ್ನು ಲೋಕಸಭೆ ಚುನಾವಣೆಯಲ್ಲಿ ಆರಂಭಿಸಲು ಮುಂದಾಗಿದ್ದು, ಬಹುತೇಕ ಇದೇ ಘೋಷವಾಕ್ಯ ಪ್ರಚಾರದ ಮುನ್ನಲೆಗೆ ಬರಲಿದೆ.

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬರುವ ಮುನ್ನ ಬ್ರಿಟಿಷರ ವಿರುದ್ಧ ಹೋರಾಟ ನಡೆಸಲು ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರು ಅಂತಿಮ ಅಸ್ತ್ರವಾಗಿ ಕ್ವಿಟ್ ಇಂಡಿಯ ಚಳುವಳಿಗೆ ಕರೆಕೊಟ್ಟಿದ್ದರು.
ಇದರ ಪರಿಣಾಮ ಭಾರತೀಯರೆಲ್ಲರೂ ತಮ್ಮ ವೈಮನಸ್ಸು, ಭಿನ್ನಾಭಿಪ್ರಾಯ, ಜಾತಿ, ಧರ್ಮ ಮರೆತು ಬ್ರಿಟಿಷರ ವಿರುದ್ಧ ಒಂದಾಗಿ ದೇಶದ ಸ್ವತಂತ್ರಕ್ಕಾಗಿ ಧುಮುಕಿದ್ದರು.

ಈಗ ಇದೇ ಅಸ್ತ್ರವನ್ನು ಪ್ರತಿಪಕ್ಷಗಳ ವಿರುದ್ಧ ಬಳಸಲು ಮುಂದಾಗಿರುವ ಬಿಜೆಪಿ ಇಂಡಿಯಾಗೆ ಪರ್ಯಾಯವಾಗಿ ಕ್ವಿಟ್ ಇಂಡಿಯ ಅಭಿಯಾನವನ್ನು ದೇಶಾದ್ಯಂತ ನಡೆಸಿ ಮತದಾರರನ್ನು ತನ್ನತ್ತ ಸೆಳೆಯಲು ರಣತಂತ್ರ ರೂಪಿಸಿದೆ.

ಪ್ರಧಾನಿ ನರೇಂದ್ರಮೋದಿ ಅವರು ಕ್ವಿಟ್ ಇಂಡಿಯ ಚಳುವಳಿ ಸ್ಮರಣಾರ್ಥ ಮಾತನಾಡಿ, ಭ್ರಷ್ಟಾಚಾರ, ವಂಶ ಪಾರಂಪರ್ಯ ಹಾಗೂ ತುಷ್ಟೀಕರಣ ನಡೆಸುತ್ತಿರುವ ಇಂಡಿಯ ಮೈತ್ರಿಕೂಟವನ್ನು ಕ್ವಿಟ್ ಇಂಡಿಯಾದ ಮೂಲಕ ಪರಾಭವಗೊಳಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.

lokesh

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

9 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

11 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

11 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

12 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

13 hours ago