ರಾಜಕೀಯ

ನಾಳೆ ತೆಲಂಗಾಣ ಚುನಾವಣಾ ಅಖಾಡದಲ್ಲಿ ಸಿದ್ದು ಮತ ಬೇಟೆ

ಬೆಂಗಳೂರು : ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯ ಕಾವು ದಿನ ದಿನ ಹೆಚ್ಚುತ್ತಲೇ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರಾಜ್ಯದ ಕೈ ನಾಯಕರು ಸತತ ಪ್ರವಾಸ ಕೈಗೊಳ್ಳುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿಯಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಲಂಗಾಣದಲ್ಲಿ ಪ್ರಚಾರಕ್ಕೆಂದು ತೆರಳುತ್ತಿದ್ದಾರೆ. ನಾಳೆ ಬೆಂಗಳೂರಿನಿಂದ ಹೈದರಾಬಾದ್ ತೆರಳಲಿರುವ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಕಾಂಗ್ರೆಸ್ ಪರ ಮತಯಾಚಿಸಲಿದ್ದಾರೆ.

ನಾಳೆ ಇಡೀ ದಿನ ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡಸಲಿದ್ದಾರೆ. ಇದಕ್ಕೂ ಮೊದಲು ಡಿ.ಕೆ ಶಿವಕುಮಾರ್ ಸೇರಿ ನಾಲ್ವರು ರಾಜ್ಯ ನಾಯಕರು ತೆಲಂಗಾಣದಲ್ಲಿ ಪರವಾಸ ಕೈಗೊಂಡಿದ್ದರು. ಜೊತೆಗೆ ತೆಲಂಗಾಣದಲ್ಲೂ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವುದಾಗಿ ಭರವಸೆ ನೀಡಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್ ಮತದಾರರ ಸೆಳೆಯಲು ರಾಜ್ಯದಂತೆ ಗ್ಯಾರಂಟಿ ಯೋಜನೆಗಳ ಘೋಷಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 6 ಗ್ಯಾರಂಟಿಗಳ ಜಾರಿಗೆ ತರುವುದಾಗಿ ಘೋಷಿಸಿದೆ. ಮಹಾಲಕ್ಷ್ಮಿ ,ರೈತ ಭರೋಸಾ, ಗೃಹಜ್ಯೋತಿ, ಇಂದಿರಮ್ಮ ಮನೆ, ಯುವ ವಿಕಾಸಂ ಎಂಬ ಗ್ಯಾರಂಟಿಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ.

lokesh

Recent Posts

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

2 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

19 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

45 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

1 hour ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

2 hours ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

2 hours ago