ರಾಜಕೀಯ

ನಾಳೆ ತೆಲಂಗಾಣ ಚುನಾವಣಾ ಅಖಾಡದಲ್ಲಿ ಸಿದ್ದು ಮತ ಬೇಟೆ

ಬೆಂಗಳೂರು : ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯ ಕಾವು ದಿನ ದಿನ ಹೆಚ್ಚುತ್ತಲೇ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರಾಜ್ಯದ ಕೈ ನಾಯಕರು ಸತತ ಪ್ರವಾಸ ಕೈಗೊಳ್ಳುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿಯಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಲಂಗಾಣದಲ್ಲಿ ಪ್ರಚಾರಕ್ಕೆಂದು ತೆರಳುತ್ತಿದ್ದಾರೆ. ನಾಳೆ ಬೆಂಗಳೂರಿನಿಂದ ಹೈದರಾಬಾದ್ ತೆರಳಲಿರುವ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಕಾಂಗ್ರೆಸ್ ಪರ ಮತಯಾಚಿಸಲಿದ್ದಾರೆ.

ನಾಳೆ ಇಡೀ ದಿನ ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡಸಲಿದ್ದಾರೆ. ಇದಕ್ಕೂ ಮೊದಲು ಡಿ.ಕೆ ಶಿವಕುಮಾರ್ ಸೇರಿ ನಾಲ್ವರು ರಾಜ್ಯ ನಾಯಕರು ತೆಲಂಗಾಣದಲ್ಲಿ ಪರವಾಸ ಕೈಗೊಂಡಿದ್ದರು. ಜೊತೆಗೆ ತೆಲಂಗಾಣದಲ್ಲೂ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವುದಾಗಿ ಭರವಸೆ ನೀಡಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್ ಮತದಾರರ ಸೆಳೆಯಲು ರಾಜ್ಯದಂತೆ ಗ್ಯಾರಂಟಿ ಯೋಜನೆಗಳ ಘೋಷಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 6 ಗ್ಯಾರಂಟಿಗಳ ಜಾರಿಗೆ ತರುವುದಾಗಿ ಘೋಷಿಸಿದೆ. ಮಹಾಲಕ್ಷ್ಮಿ ,ರೈತ ಭರೋಸಾ, ಗೃಹಜ್ಯೋತಿ, ಇಂದಿರಮ್ಮ ಮನೆ, ಯುವ ವಿಕಾಸಂ ಎಂಬ ಗ್ಯಾರಂಟಿಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago