ರಾಜಕೀಯ

ನಾಳೆ ತೆಲಂಗಾಣ ಚುನಾವಣಾ ಅಖಾಡದಲ್ಲಿ ಸಿದ್ದು ಮತ ಬೇಟೆ

ಬೆಂಗಳೂರು : ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯ ಕಾವು ದಿನ ದಿನ ಹೆಚ್ಚುತ್ತಲೇ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರಾಜ್ಯದ ಕೈ ನಾಯಕರು ಸತತ ಪ್ರವಾಸ ಕೈಗೊಳ್ಳುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿಯಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೆಲಂಗಾಣದಲ್ಲಿ ಪ್ರಚಾರಕ್ಕೆಂದು ತೆರಳುತ್ತಿದ್ದಾರೆ. ನಾಳೆ ಬೆಂಗಳೂರಿನಿಂದ ಹೈದರಾಬಾದ್ ತೆರಳಲಿರುವ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಕಾಂಗ್ರೆಸ್ ಪರ ಮತಯಾಚಿಸಲಿದ್ದಾರೆ.

ನಾಳೆ ಇಡೀ ದಿನ ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡಸಲಿದ್ದಾರೆ. ಇದಕ್ಕೂ ಮೊದಲು ಡಿ.ಕೆ ಶಿವಕುಮಾರ್ ಸೇರಿ ನಾಲ್ವರು ರಾಜ್ಯ ನಾಯಕರು ತೆಲಂಗಾಣದಲ್ಲಿ ಪರವಾಸ ಕೈಗೊಂಡಿದ್ದರು. ಜೊತೆಗೆ ತೆಲಂಗಾಣದಲ್ಲೂ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವುದಾಗಿ ಭರವಸೆ ನೀಡಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್ ಮತದಾರರ ಸೆಳೆಯಲು ರಾಜ್ಯದಂತೆ ಗ್ಯಾರಂಟಿ ಯೋಜನೆಗಳ ಘೋಷಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 6 ಗ್ಯಾರಂಟಿಗಳ ಜಾರಿಗೆ ತರುವುದಾಗಿ ಘೋಷಿಸಿದೆ. ಮಹಾಲಕ್ಷ್ಮಿ ,ರೈತ ಭರೋಸಾ, ಗೃಹಜ್ಯೋತಿ, ಇಂದಿರಮ್ಮ ಮನೆ, ಯುವ ವಿಕಾಸಂ ಎಂಬ ಗ್ಯಾರಂಟಿಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ.

lokesh

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

6 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

8 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

9 hours ago