ರಾಜಕೀಯ

ವೈದ್ಯ ವೃತ್ತಿಗೆ ರಾಜೀನಾಮೆ, ಲೋಕಸಭೆಯಲ್ಲಿ ಸ್ಪರ್ಧಿಸಲು ಚಾ.ನಗರಕ್ಕೆ ಬಂದ ಶ್ರೀನಿವಾಸ್‌ ಪ್ರಸಾದ್‌ ಅಳಿಯ!

ಕಳೆದ ವರ್ಷದ ಏಪ್ರಿಲ್‌ 13ರಂದು ವಿ ಶ್ರೀನಿವಾಸ್‌ ಪ್ರಸಾದ್‌ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಚಾಮರಾಜನಗರದ ಹಾಲಿ ಸಂಸದನಾಗಿರುವ ವಿ ಶ್ರೀನಿವಾಸ್‌ ಪ್ರಸಾದ್‌ ಬದಲು ಈ ಬಾರಿಯ ಲೋಕಸಭೆ ಚುನಾವಣೆಗೆ ಯಾವ ಸ್ಪರ್ಧಿ ಬಿಜೆಪಿಯನ್ನು ಪ್ರತಿನಿಧಿಸಬಹುದು ಎಂದು ಪ್ರಶ್ನೆಯೂ ಸಹ ಎದ್ದಿತ್ತು.

ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀನಿವಾಸ್‌ ಪ್ರಸಾದ್‌ ಅವರ ಅಳಿಯ ಮೋಹನ್‌ ಮಾತನಾಡಿದ್ದು, ತಾವು ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ಹೌದು, ಬೆಂಗಳೂರಿನ ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ಬೆನ್ನುಹುರಿ ತಜ್ಞನಾಗಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಮೋಹನ್‌ ಅವರು ಜನರ ಸೇವೆ ಮಾಡಲು ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ, ಇದಕ್ಕಾಗಿ ಜನಪ್ರತಿನಿಧಿಯಾಗಬೇಕೆಂಬ ತೀರ್ಮಾನ ಮಾಡಬೇಕು ಎಂದಿದ್ದಾರೆ. ಇದಕ್ಕಾಗಿ ಬಿಜೆಪಿಯ ಮುಖಂಡರನ್ನೂ ಸಹ ಈಗಾಗಲೇ ಭೇಟಿ ಮಾಡಿ ತನ್ನ ಇಂಗಿತವನ್ನೂ ಸಹ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದ ಮೋಹನ್‌ ಮೀಸಲಾತಿ ಕ್ಷೇತ್ರವಾಗಿರುವ ಚಾಮರಾಜನಗರದಲ್ಲಿ ಕೈಗಾರಿಕೆ ಹಾಗೂ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವುದು ತನ್ನ ದೂರದೃಷ್ಠಿ ಎಂದು ಹೇಳಿಕೊಂಡರು.

ಇನ್ನು ಇದನ್ನೆಲ್ಲಾ ಪಕ್ಷದ ಮುಖಂಡರ ಜತೆ ಚರ್ಚಿಸಿದ್ದೇನೆ, ಅವರೂ ಸಹ ಇದಕ್ಕೆ ಸಹಮತ ಸೂಚಿಸಿದ್ದಾರೆ, ಅವರೂ ಸಹ ಪ್ರಯತ್ನ ಪಡ್ತಾರೆ, ಜನಗಳ ಅಭಿಪ್ರಾಯ ತೆಗೆದುಕೊಂಡು, ಸೂಕ್ತ ಸಮಯದಲ್ಲಿ ನಿರ್ಧಾರ ಮಾಡಿ ಟಿಕೆಟ್‌ ಕೊಟ್ಟು ಗೆಲ್ಲಿಸುವ ಭರವಸೆಯನ್ನು ಪಕ್ಷ ಕೊಟ್ಟಿದೆ ಎಂದು ಮೋಹನ್‌ ಹೇಳಿದರು.

andolana

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

17 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago