ಕಳೆದ ವರ್ಷದ ಏಪ್ರಿಲ್ 13ರಂದು ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಚಾಮರಾಜನಗರದ ಹಾಲಿ ಸಂಸದನಾಗಿರುವ ವಿ ಶ್ರೀನಿವಾಸ್ ಪ್ರಸಾದ್ ಬದಲು ಈ ಬಾರಿಯ ಲೋಕಸಭೆ ಚುನಾವಣೆಗೆ ಯಾವ ಸ್ಪರ್ಧಿ ಬಿಜೆಪಿಯನ್ನು ಪ್ರತಿನಿಧಿಸಬಹುದು ಎಂದು ಪ್ರಶ್ನೆಯೂ ಸಹ ಎದ್ದಿತ್ತು.
ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀನಿವಾಸ್ ಪ್ರಸಾದ್ ಅವರ ಅಳಿಯ ಮೋಹನ್ ಮಾತನಾಡಿದ್ದು, ತಾವು ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಹೌದು, ಬೆಂಗಳೂರಿನ ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ಬೆನ್ನುಹುರಿ ತಜ್ಞನಾಗಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಮೋಹನ್ ಅವರು ಜನರ ಸೇವೆ ಮಾಡಲು ಜನರ ಸೇವೆ ಮಾಡಲು ರಾಜಕೀಯ ಕ್ಷೇತ್ರ, ಇದಕ್ಕಾಗಿ ಜನಪ್ರತಿನಿಧಿಯಾಗಬೇಕೆಂಬ ತೀರ್ಮಾನ ಮಾಡಬೇಕು ಎಂದಿದ್ದಾರೆ. ಇದಕ್ಕಾಗಿ ಬಿಜೆಪಿಯ ಮುಖಂಡರನ್ನೂ ಸಹ ಈಗಾಗಲೇ ಭೇಟಿ ಮಾಡಿ ತನ್ನ ಇಂಗಿತವನ್ನೂ ಸಹ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದ ಮೋಹನ್ ಮೀಸಲಾತಿ ಕ್ಷೇತ್ರವಾಗಿರುವ ಚಾಮರಾಜನಗರದಲ್ಲಿ ಕೈಗಾರಿಕೆ ಹಾಗೂ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವುದು ತನ್ನ ದೂರದೃಷ್ಠಿ ಎಂದು ಹೇಳಿಕೊಂಡರು.
ಇನ್ನು ಇದನ್ನೆಲ್ಲಾ ಪಕ್ಷದ ಮುಖಂಡರ ಜತೆ ಚರ್ಚಿಸಿದ್ದೇನೆ, ಅವರೂ ಸಹ ಇದಕ್ಕೆ ಸಹಮತ ಸೂಚಿಸಿದ್ದಾರೆ, ಅವರೂ ಸಹ ಪ್ರಯತ್ನ ಪಡ್ತಾರೆ, ಜನಗಳ ಅಭಿಪ್ರಾಯ ತೆಗೆದುಕೊಂಡು, ಸೂಕ್ತ ಸಮಯದಲ್ಲಿ ನಿರ್ಧಾರ ಮಾಡಿ ಟಿಕೆಟ್ ಕೊಟ್ಟು ಗೆಲ್ಲಿಸುವ ಭರವಸೆಯನ್ನು ಪಕ್ಷ ಕೊಟ್ಟಿದೆ ಎಂದು ಮೋಹನ್ ಹೇಳಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…