ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗಿಳಿದ ವೀರಪ್ಪನ್‌ ಪುತ್ರಿ

ಕಾಡುಗಳ್ಳ ಎಂದೇ ಕುಖ್ಯಾತಿಯನ್ನು ಹೊಂದಿದ್ದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಲ್ಲಿ ಎನ್‌ಟಿಕೆ ( ನಾಮ್‌ ತಮಿಳರ್‌ ಕಚ್ಚಿ ) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧೆಗೆ ಇಳಿದಿದ್ದಾರೆ.

ತಮಿಳುನಾಡು ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯಾಗಿದ್ದ ವೀರಪ್ಪನ್‌ ಪುತ್ರಿ ಇದೇ ಕೃಷ್ಣಗಿರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಎನ್‌ಟಿಕೆ ಪಕ್ಷದ ಅಭ್ಯರ್ಥಿಯಾಗಿ ವಿದ್ಯಾರಾಣಿ ಕಣಕ್ಕಿಳಿದಿದ್ದು, ನಿನ್ನೆ ( ಮಾರ್ಚ್‌ 24 ) ಸಿ.ನರಸಿಂಹನ್‌ ಎಂಬುವವರಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ.

ಇನ್ನು ಟಿಕೆಟ್‌ ಘೋಷಣೆ ಮಾಡಿದ ಬಳಿಕ ಮಾತನಾಡಿದ ಎನ್‌ಟಿಕೆ ಪಕ್ಷದ ಮುಖ್ಯಸ್ಥ ಸೀಮನ್‌ ʼಅವರ ತಂದೆ ಅರಣ್ಯವನ್ನು ರಕ್ಷಿಸಿದ್ದರು. ಅವರ ಮಗಳು ಈಗ ತಮಿಳರನ್ನು ರಕ್ಷಿಸುತ್ತಿದ್ದಾರೆʼ ಎಂದು ಹೇಳಿಕೆಯನ್ನು ನೀಡಿದರು.

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago