ರಾಜಕೀಯ

ವಿಜಯೇಂದ್ರ ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾಗಿದ್ದಾರೆ : ಅಣ್ಣಾಮಲೈ

ಹೈದರಾಬಾದ್ : ವಿಜಯೇಂದ್ರ ಅವರು ಪಕ್ಷದ ಯುವ ನಾಯಕನಾಗಿ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿದ್ದಾರೆ. ಅವರು ಯಡಿಯೂರಪ್ಪನವರ ಪುತ್ರನೇ ಇರಬಹುದು ಆದರೆ ಯುವ ಮೋರ್ಚಾದ ಅಧ್ಯಕ್ಷನಾಗಿ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿಕೊಂಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿರುವುದನ್ನು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಸಮರ್ಥಿಸಿಕೊಂಡಿದ್ದಾರೆ.

ತೆಲಂಗಾಣದಲ್ಲಿ ಪಕ್ಷದ ಪರ ಪ್ರಚಾರ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ತಮಿಳುನಾಡು ಮತ್ತು ತೆಲಂಗಾಣದಲ್ಲಿ ಪರಿವಾರ ಯಾವ ರೀತಿ ಇದೆ ಎಂದರೆ, ಒಂದೇ ಕುಟುಂಬದ ಹಲವರು ಪ್ರಭಾವಿ ಹುದ್ದೆಗಳನ್ನು ಅಲಂಕರಿಸುತ್ತಾರೆ. ವಿಜಯೇಂದ್ರ ಅವರು ದೀರ್ಘಕಾಲ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾಗಿದ್ದಾರೆ ಎಂದಿದ್ದಾರೆ.

ಹಲವು ದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗಷ್ಟೇ ಬಿ.ವೈ ವಿಜಯೇಂದ್ರ ನೇಮಕಗೊಂಡಿದ್ದರು. ರಾಜ್ಯ ಬಿಜೆಪಿಯ 11 ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಳೀನ್‌ ಕುಮಾರ್‌ ಕಟೀಲ್‌ ಅವರು ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದರು.

ಇನ್ನು ತಮಗೆ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ವಿಜಯೇಂದ್ರ, ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ. ಯಾರಿಗೆ ರಾಜ್ಯಾಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂಬುದರ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ನನಗೆ ಈ ಜವಬ್ದಾರಿ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.

lokesh

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

9 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

12 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

12 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

13 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

13 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

13 hours ago