ರಾಜಕೀಯ

ಬಾಂಬ್‌ ಬೆದರಿಕೆ ಹಾಕಲು ಸರ್ಕಾರದ ದುರ್ಬಲ ನಾಯಕತ್ವವೇ ಕಾರಣ : ಗೋವಿಂದ ಕಾರಜೋಳ

ಧಾರವಾಡ : ಬೆಂಗಳೂರಿನ ಶಾಲೆಗಳಿಗೆ ಏಕಕಾಲದಲ್ಲಿ ಬಾಂಬ್‌ ಬೆದರಿಕೆ ಹಾಕಿರುವುದಕ್ಕೆ ರಾಜ್ಯ ಸರ್ಕಾರದ ದುರ್ಬಲ ನಾಯಕತ್ವವೇ ಕಾರಣ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದು ಜನರಲ್ಲಿ ಭಯದ ವಾತವಾರಣ ಸೃಷ್ಟಿಸಿ ಆಡಳಿತ ಮಾಡುವ ಹುನ್ನಾರ. ಯಾವುದೇ ಕಾರಣಕ್ಕೂ ಈ ರೀತಿಯ ಕೃತ್ಯಕ್ಕೆ ಕೈ ಹಾಕುವ ದೇಶದ್ರೋಹಿಗಳನ್ನು ಸುಮ್ಮನೆ ಬಿಡಬಾರದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಈಗಾಗಲೇ ಆರೋಪಿಗಳನ್ನು ಬಂಧಿಸಬೇಕಿತ್ತು. ಈ ಸರ್ಕಾರ ಆಡಳಿತದಲ್ಲಿ ಹಿಡಿತವಿಲ್ಲದೆ ನಡೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.

ನೆನ್ನೆ ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿತ್ತು ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್‌ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದರು.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.

ಬೆದರಿಕೆ ಮೇಲ್‌ ಬಗ್ಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್‌ ಸಿಬ್ಬಂಧಿ ಹಾಗೂ ಬಾಂಬ್‌ ಸ್ಕ್ವಾಡ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವರೆಗೂ ಆರೋಪಿಗಳ ಪತ್ತೆಯಾಗಿಲ್ಲ.

lokesh

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

12 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

14 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

16 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

16 hours ago