ರಾಜಕೀಯ

ಬಾಂಬ್‌ ಬೆದರಿಕೆ ಹಾಕಲು ಸರ್ಕಾರದ ದುರ್ಬಲ ನಾಯಕತ್ವವೇ ಕಾರಣ : ಗೋವಿಂದ ಕಾರಜೋಳ

ಧಾರವಾಡ : ಬೆಂಗಳೂರಿನ ಶಾಲೆಗಳಿಗೆ ಏಕಕಾಲದಲ್ಲಿ ಬಾಂಬ್‌ ಬೆದರಿಕೆ ಹಾಕಿರುವುದಕ್ಕೆ ರಾಜ್ಯ ಸರ್ಕಾರದ ದುರ್ಬಲ ನಾಯಕತ್ವವೇ ಕಾರಣ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪ ಮಾಡಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದು ಜನರಲ್ಲಿ ಭಯದ ವಾತವಾರಣ ಸೃಷ್ಟಿಸಿ ಆಡಳಿತ ಮಾಡುವ ಹುನ್ನಾರ. ಯಾವುದೇ ಕಾರಣಕ್ಕೂ ಈ ರೀತಿಯ ಕೃತ್ಯಕ್ಕೆ ಕೈ ಹಾಕುವ ದೇಶದ್ರೋಹಿಗಳನ್ನು ಸುಮ್ಮನೆ ಬಿಡಬಾರದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಈಗಾಗಲೇ ಆರೋಪಿಗಳನ್ನು ಬಂಧಿಸಬೇಕಿತ್ತು. ಈ ಸರ್ಕಾರ ಆಡಳಿತದಲ್ಲಿ ಹಿಡಿತವಿಲ್ಲದೆ ನಡೆಯುತ್ತಿದೆ ಎಂದು ಕಿಡಿ ಕಾರಿದ್ದಾರೆ.

ನೆನ್ನೆ ಬೆಳಗ್ಗೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಬಸವೇಶ್ವರ ನಗರ ಹಾಗೂ ಯಲಹಂಕ ಸೇರಿದಂತೆ ವಿವಿಧ ಸ್ಥಳಗಳ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಇ-ಮೇಲ್‌ ಕಳುಹಿಸಲಾಗಿತ್ತು ವಿಚಾರ ತಿಳಿದು ಆತಂಕಗೊಂಡ ಪೋಷಕರು ಮಕ್ಕಳನ್ನು ಶಾಲೆಯಿಂದ ವಾಪಸ್‌ ಕರೆದುಕೊಂಡು ಹೋಗಲು ಶಾಲೆಗಳ ಮುಂದೆ ಜಮಾಯಿಸಿದ್ದರು.

ಕಳೆದ ಒಂದು ವರ್ಷದ ಹಿಂದೆ ಬೆಂಗಳೂರಿನ 30ಕ್ಕೂ ಹೆಚ್ಚು ಶಾಲೆಗಳಿಗೆ ಈ-ಮಮೇಲ್‌ ಮೂಲಕ ಬೆದರಿಕೆ ಕರೆ ಮಾಡಲಾಗಿತ್ತು. ಆದರೇ ಇಲ್ಲಿವರೆಗೆ ಆ ಕರೆ ಮಾಡಿದ ವ್ಯಕ್ತಿ ಯಾರು ಎಂದು ಇಂದಿಗೂ ತಿಳಿದು ಬಂದಿಲ್ಲ.

ಬೆದರಿಕೆ ಮೇಲ್‌ ಬಗ್ಗೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌, ಇದೆಲ್ಲಾ ಹುಸಿ ಕರೆಗಳು. ಯಾರು ಯಾವುದೇ ಆತಂಕ ಪಡಬೇಕಾಗಿಲ್ಲ. ಪೊಲೀಸರು ಸೂಕ್ತ ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಬೆದರಿಕೆ ಬಂದ ಶಾಲೆಗಳಿಗೆ ಪೊಲೀಸ್‌ ಸಿಬ್ಬಂಧಿ ಹಾಗೂ ಬಾಂಬ್‌ ಸ್ಕ್ವಾಡ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವರೆಗೂ ಆರೋಪಿಗಳ ಪತ್ತೆಯಾಗಿಲ್ಲ.

lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago