ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹೇಳಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಖಾಸಗಿ ಮಾದ್ಯಮವೊಂದರ ಜೊತೆ ಮಾತನಾಡಿರುವ ಅವರು ಈ ಹಿಂದೆ ನಡೆದ ಚುನಾವಣೆಯ ಸಮಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಾಗ ನನಗೆ ಧಮ್ಕಿ ಹಾಕಿದ್ದ. ನನಗೆ ಚಾಕುವಿನಿಂದ ಹಲ್ಲೆ ಮಾಡಿದ ದಿನ ಚನ್ನರಾಜ್ ಬಂದಿದ್ದಾರೆ ಅಂತಾ ಕರೆದಿದ್ದರು ಅದಕ್ಕೆ ನಾನು ಮಾತನಾಡಲು ಹೋದೆ ಆಗ ಅವರ ಸಹಚರರಾದ ಸುಜಯ್ ಹಾಗೂ ಸದ್ದಾಂ ನನ್ನ ಮೇಲೆ ಹಲ್ಲೆ ಮಾಡಿದರು. ಆದರೆ ನಾನೆ ಕೈ ಕುಯ್ದುಕೊಂಡೆ ಎಂದು ಘಟನೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.
ಇನ್ನು ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆಯ ಕುರಿತಾಗಿ ಮಾತನಾಡಿದ್ದ ಚನ್ನರಾಜ ಹಟ್ಟಿಹೊಳಿಯವರು ಈ ಹಲ್ಲೆ ಆರೋಪ ಸತ್ಯಕ್ಕೆ ದೂರವಾದ ಮಾತು. ಇದೊಂದು ಸುಳ್ಳು ಆರೋಪ. ನಾವು ಶಿಸ್ತಿನಿಂದ ರಾಜಕಾರಣ ಮಾಡುತ್ತೇವೆ. ಹಲ್ಲೆ ಮಾಡುವಂತಹ ಕೆಲಸಕ್ಕೆ ಕೈ ಹಾಕುವುದಿಲ್ಲ ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಸ್ಪಷ್ಟ ಮಾಹಿತಿ ಹೊರಬರಬೇಕು. ಯಾರು ಹಲ್ಲೆ ಮಾಡಿದ್ದಾರೆ ಎನ್ನುವ ಬಗ್ಗೆ ಫಾರೆನ್ಸಿಕ್ ವರದಿ ಬರೆಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಈ ಬಗ್ಗೆ ಅನುಮಾನಗಳಿವೆ. ನನ್ನ ವಿರುದ್ಧ ಶಡ್ಯಂತ್ರ ರೂಪಿಸಲಾಗಿದೆ ಈ ಹಲ್ಲೆ ಆರೋಪದಿಂದ ನನ್ನ ವರ್ಚಸ್ಸು ಹಾಳಾಗುತ್ತಿದೆ. ಪೃಥ್ವಿ ಸಿಂಗ್ ಅವರು ವಾಸವಿರುವ ಮನೆ ಈ ಮೊದಲು ನನ್ನ ಕಚೇರಿಯಾಗಿತ್ತು. ಹಾಗಾಗಿ ರೆಂಟ್ ಅಗ್ರಿಮೆಂಟ್ ವಾಪಸ್ ಕೇಳಲು ನನ್ನ ಸಹಚರರು ಹೋಗಿದ್ದರು ಅಷ್ಟೇ. ಪೃಥ್ವಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದಿದ್ದರು.
ನವದೆಹಲಿ: ಇಂದಿನಿಂದ ಆರಂಭವಾಗಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಿದೆ. ಸಂವಿಧಾನದ ತಿದ್ದುಪಡಿ ಮಸೂದೆ-2026,…
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…