ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹೇಳಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಖಾಸಗಿ ಮಾದ್ಯಮವೊಂದರ ಜೊತೆ ಮಾತನಾಡಿರುವ ಅವರು ಈ ಹಿಂದೆ ನಡೆದ ಚುನಾವಣೆಯ ಸಮಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಾಗ ನನಗೆ ಧಮ್ಕಿ ಹಾಕಿದ್ದ. ನನಗೆ ಚಾಕುವಿನಿಂದ ಹಲ್ಲೆ ಮಾಡಿದ ದಿನ ಚನ್ನರಾಜ್ ಬಂದಿದ್ದಾರೆ ಅಂತಾ ಕರೆದಿದ್ದರು ಅದಕ್ಕೆ ನಾನು ಮಾತನಾಡಲು ಹೋದೆ ಆಗ ಅವರ ಸಹಚರರಾದ ಸುಜಯ್ ಹಾಗೂ ಸದ್ದಾಂ ನನ್ನ ಮೇಲೆ ಹಲ್ಲೆ ಮಾಡಿದರು. ಆದರೆ ನಾನೆ ಕೈ ಕುಯ್ದುಕೊಂಡೆ ಎಂದು ಘಟನೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.
ಇನ್ನು ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆಯ ಕುರಿತಾಗಿ ಮಾತನಾಡಿದ್ದ ಚನ್ನರಾಜ ಹಟ್ಟಿಹೊಳಿಯವರು ಈ ಹಲ್ಲೆ ಆರೋಪ ಸತ್ಯಕ್ಕೆ ದೂರವಾದ ಮಾತು. ಇದೊಂದು ಸುಳ್ಳು ಆರೋಪ. ನಾವು ಶಿಸ್ತಿನಿಂದ ರಾಜಕಾರಣ ಮಾಡುತ್ತೇವೆ. ಹಲ್ಲೆ ಮಾಡುವಂತಹ ಕೆಲಸಕ್ಕೆ ಕೈ ಹಾಕುವುದಿಲ್ಲ ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಸ್ಪಷ್ಟ ಮಾಹಿತಿ ಹೊರಬರಬೇಕು. ಯಾರು ಹಲ್ಲೆ ಮಾಡಿದ್ದಾರೆ ಎನ್ನುವ ಬಗ್ಗೆ ಫಾರೆನ್ಸಿಕ್ ವರದಿ ಬರೆಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಈ ಬಗ್ಗೆ ಅನುಮಾನಗಳಿವೆ. ನನ್ನ ವಿರುದ್ಧ ಶಡ್ಯಂತ್ರ ರೂಪಿಸಲಾಗಿದೆ ಈ ಹಲ್ಲೆ ಆರೋಪದಿಂದ ನನ್ನ ವರ್ಚಸ್ಸು ಹಾಳಾಗುತ್ತಿದೆ. ಪೃಥ್ವಿ ಸಿಂಗ್ ಅವರು ವಾಸವಿರುವ ಮನೆ ಈ ಮೊದಲು ನನ್ನ ಕಚೇರಿಯಾಗಿತ್ತು. ಹಾಗಾಗಿ ರೆಂಟ್ ಅಗ್ರಿಮೆಂಟ್ ವಾಪಸ್ ಕೇಳಲು ನನ್ನ ಸಹಚರರು ಹೋಗಿದ್ದರು ಅಷ್ಟೇ. ಪೃಥ್ವಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…