ರಾಜಕೀಯ

ನನ್ನ ಕುಟುಂಬಕ್ಕೆ ಏನೇ ಆದ್ರೂ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಕಾರಣ : ಪೃಥ್ವಿ ಸಿಂಗ್‌

ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಹೇಳಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಖಾಸಗಿ ಮಾದ್ಯಮವೊಂದರ ಜೊತೆ ಮಾತನಾಡಿರುವ ಅವರು ಈ ಹಿಂದೆ ನಡೆದ ಚುನಾವಣೆಯ ಸಮಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮಾಗ ನನಗೆ ಧಮ್ಕಿ ಹಾಕಿದ್ದ. ನನಗೆ ಚಾಕುವಿನಿಂದ ಹಲ್ಲೆ ಮಾಡಿದ ದಿನ ಚನ್ನರಾಜ್‌ ಬಂದಿದ್ದಾರೆ ಅಂತಾ ಕರೆದಿದ್ದರು ಅದಕ್ಕೆ ನಾನು ಮಾತನಾಡಲು ಹೋದೆ ಆಗ ಅವರ ಸಹಚರರಾದ ಸುಜಯ್‌ ಹಾಗೂ ಸದ್ದಾಂ ನನ್ನ ಮೇಲೆ ಹಲ್ಲೆ ಮಾಡಿದರು. ಆದರೆ ನಾನೆ ಕೈ ಕುಯ್ದುಕೊಂಡೆ ಎಂದು ಘಟನೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.

ಇನ್ನು ಪೃಥ್ವಿ ಸಿಂಗ್‌ ಅವರ ಮೇಲಿನ ಹಲ್ಲೆಯ ಕುರಿತಾಗಿ ಮಾತನಾಡಿದ್ದ ಚನ್ನರಾಜ ಹಟ್ಟಿಹೊಳಿಯವರು ಈ ಹಲ್ಲೆ ಆರೋಪ ಸತ್ಯಕ್ಕೆ ದೂರವಾದ ಮಾತು. ಇದೊಂದು ಸುಳ್ಳು ಆರೋಪ. ನಾವು ಶಿಸ್ತಿನಿಂದ ರಾಜಕಾರಣ ಮಾಡುತ್ತೇವೆ. ಹಲ್ಲೆ ಮಾಡುವಂತಹ ಕೆಲಸಕ್ಕೆ ಕೈ ಹಾಕುವುದಿಲ್ಲ ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಸ್ಪಷ್ಟ ಮಾಹಿತಿ ಹೊರಬರಬೇಕು. ಯಾರು ಹಲ್ಲೆ ಮಾಡಿದ್ದಾರೆ ಎನ್ನುವ ಬಗ್ಗೆ ಫಾರೆನ್ಸಿಕ್‌ ವರದಿ ಬರೆಬೇಕಾಗುತ್ತದೆ. ಪೊಲೀಸ್‌ ಇಲಾಖೆಯಲ್ಲಿ ಈ ಬಗ್ಗೆ ಅನುಮಾನಗಳಿವೆ. ನನ್ನ ವಿರುದ್ಧ ಶಡ್ಯಂತ್ರ ರೂಪಿಸಲಾಗಿದೆ ಈ ಹಲ್ಲೆ ಆರೋಪದಿಂದ ನನ್ನ ವರ್ಚಸ್ಸು ಹಾಳಾಗುತ್ತಿದೆ. ಪೃಥ್ವಿ ಸಿಂಗ್‌ ಅವರು ವಾಸವಿರುವ ಮನೆ ಈ ಮೊದಲು ನನ್ನ ಕಚೇರಿಯಾಗಿತ್ತು. ಹಾಗಾಗಿ ರೆಂಟ್‌ ಅಗ್ರಿಮೆಂಟ್‌ ವಾಪಸ್‌ ಕೇಳಲು ನನ್ನ ಸಹಚರರು ಹೋಗಿದ್ದರು ಅಷ್ಟೇ. ಪೃಥ್ವಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದಿದ್ದರು.

lokesh

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

3 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

3 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

3 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

3 hours ago