ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹೇಳಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಖಾಸಗಿ ಮಾದ್ಯಮವೊಂದರ ಜೊತೆ ಮಾತನಾಡಿರುವ ಅವರು ಈ ಹಿಂದೆ ನಡೆದ ಚುನಾವಣೆಯ ಸಮಯದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಾಗ ನನಗೆ ಧಮ್ಕಿ ಹಾಕಿದ್ದ. ನನಗೆ ಚಾಕುವಿನಿಂದ ಹಲ್ಲೆ ಮಾಡಿದ ದಿನ ಚನ್ನರಾಜ್ ಬಂದಿದ್ದಾರೆ ಅಂತಾ ಕರೆದಿದ್ದರು ಅದಕ್ಕೆ ನಾನು ಮಾತನಾಡಲು ಹೋದೆ ಆಗ ಅವರ ಸಹಚರರಾದ ಸುಜಯ್ ಹಾಗೂ ಸದ್ದಾಂ ನನ್ನ ಮೇಲೆ ಹಲ್ಲೆ ಮಾಡಿದರು. ಆದರೆ ನಾನೆ ಕೈ ಕುಯ್ದುಕೊಂಡೆ ಎಂದು ಘಟನೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದಿದ್ದಾರೆ.
ಇನ್ನು ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆಯ ಕುರಿತಾಗಿ ಮಾತನಾಡಿದ್ದ ಚನ್ನರಾಜ ಹಟ್ಟಿಹೊಳಿಯವರು ಈ ಹಲ್ಲೆ ಆರೋಪ ಸತ್ಯಕ್ಕೆ ದೂರವಾದ ಮಾತು. ಇದೊಂದು ಸುಳ್ಳು ಆರೋಪ. ನಾವು ಶಿಸ್ತಿನಿಂದ ರಾಜಕಾರಣ ಮಾಡುತ್ತೇವೆ. ಹಲ್ಲೆ ಮಾಡುವಂತಹ ಕೆಲಸಕ್ಕೆ ಕೈ ಹಾಕುವುದಿಲ್ಲ ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಸ್ಪಷ್ಟ ಮಾಹಿತಿ ಹೊರಬರಬೇಕು. ಯಾರು ಹಲ್ಲೆ ಮಾಡಿದ್ದಾರೆ ಎನ್ನುವ ಬಗ್ಗೆ ಫಾರೆನ್ಸಿಕ್ ವರದಿ ಬರೆಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಈ ಬಗ್ಗೆ ಅನುಮಾನಗಳಿವೆ. ನನ್ನ ವಿರುದ್ಧ ಶಡ್ಯಂತ್ರ ರೂಪಿಸಲಾಗಿದೆ ಈ ಹಲ್ಲೆ ಆರೋಪದಿಂದ ನನ್ನ ವರ್ಚಸ್ಸು ಹಾಳಾಗುತ್ತಿದೆ. ಪೃಥ್ವಿ ಸಿಂಗ್ ಅವರು ವಾಸವಿರುವ ಮನೆ ಈ ಮೊದಲು ನನ್ನ ಕಚೇರಿಯಾಗಿತ್ತು. ಹಾಗಾಗಿ ರೆಂಟ್ ಅಗ್ರಿಮೆಂಟ್ ವಾಪಸ್ ಕೇಳಲು ನನ್ನ ಸಹಚರರು ಹೋಗಿದ್ದರು ಅಷ್ಟೇ. ಪೃಥ್ವಿ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…