ರಾಜಕೀಯ

ಕಾಂಗ್ರೆಸ್‌ ಭ್ರಷ್ಟಾಚಾರ ಎಲ್ಲೆ ಮೀರಿದೆ : ಯತ್ನಾಳ್‌ ಕಿಡಿ

ಬೆಂಗಳೂರು : ಕಾಂಗ್ರೆಸ್‌ ಪಕ್ಷದೊಳಗಿನ ಭ್ರಷ್ಟಾಚಾರದ ಮಟ್ಟ ಎಲ್ಲೆ ಮೀರಿದೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟಿಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ನಾಯಕ ಧೀರಜ್‌ ಪ್ರಸಾದ್‌ ಸಾಹು ಒಡೆತನದ ಸ್ಥಳಗಳ ಮೇಲೆ ಆದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು 300 ಕೋಟಿಗೂ ಹೆಚ್ಚಿನ ಹಣವನ್ನು ವಶಪಡಿಸಿಕೊಂಡಿರುವ ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ, ಬಿಜೆಪಿ ನಾಯಕ ಬಸನಗೌಡ ಪಾಟಿಲ್‌ ಯತ್ನಾಳ್‌ ಕಾಂಗ್ರೆಸ್‌ ಪಕ್ಷದೊಳಗಿನ ಭ್ರಷ್ಟಾಚಾರದ ಮಟ್ಟ ಎಲ್ಲೆ ಮೀರಿದೆ. ಈ ಅಕ್ರಮ ಹಣದ ಮೂಲವೇನು ? ಇಷ್ಟೊಂದು ಪ್ರಮಾಣದ ಹಣವನ್ನು ಧೀರಜ್‌ ಸಾಹು ಹೇಗೆ ಸಂಗ್ರಹಿಸಿದ್ದ ? ಇಂತಹ ಭ್ರಷ್ಟಾಚಾರದಿಂದಾಗಿಯೇ ಕಾಂಗ್ರೆಸ್‌ ರಾಜಕೀಯದಲ್ಲಿ ಅಧೋಗತಿಗೆ ಇಳಿದಿದೆ. ಇಂತಹ ಭ್ರಷ್ಟ ವ್ಯಕ್ತಿಗಳ ವಿರುದ್ಧ ಕಾನೂನಿನಡಿ ಕ್ರಮ ಕೈಗೊಳ್ಳುವ ಮೂಲಕ ಸರಿಯಾಗಿ ಬಿಸಿ ಮುಟ್ಟಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಒಡಿಶಾದ ಬೌಧ್‌ ಡಿಸ್ಟಿಲರಿ ಪ್ರೈವೆಟ್‌ ಲಿಮಿಟೆಡ್‌ ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಅನುಮಾನದ ಮೇರೆಗೆ ಡಿಸೆಂಬರ್‌ 6 ರಂದು ಬೌಧ್‌ ಮದ್ಯ ತಯಾರಿಕಾ ಕಂಪನಿ ಹಾಗೂ ಅದರ ಸಹ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಬರೋಬ್ಬರಿ 300 ಕೋಟಿ ರೂಪಾಯಿಗೂ ಹೆಚ್ದಾಚಿನ ಮೌಲ್ಖಯ ದಾಖಲೆ ಇಲ್ಲದ ಹಣ ಪತ್ತೆಯಾಗಿತ್ತು. ಸುಮಾರು 40 ನೋಟು ಎಣಿಕೆ ಯಂತ್ರಗಳನ್ನು ಬಳಸಿ ನೋಟು ಎಣಿಕೆ ಮಾಡಲಾಗಿತ್ತು. ಡಿಸೆಂಬರ್‌ 6 ರಂದು ಆರಂಭವಾದ ನೋಟು ಏಣಿಕೆ ಕಾರ್ಯ ಮೂರು ದಿನವಾದರೂ ಮುಗಿದಿರಲಿಲ್ಲ.

ಕಾಂಗ್ರೆಸ್‌ ನಾಯಕ ಧೀರಜ್‌ ಸಾಹು ಅವರು ಮದ್ಯ ತಯಾರಿಕಾ ಕಂಪನಿ ಬಲದೇವ್‌ ಸಾಹು ಅಂಡ್‌ ಗ್ರೂಪ್‌ ಕಂಪನಿಗಳೊಂದಿಗೆ ಸಂಬಂಧ ಹೊದ್ದಿದ್ದಾರೆ ಎನ್ನಲಾಗಿದೆ.

lokesh

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

4 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

4 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

4 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

6 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

8 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

9 hours ago