ರಾಜಕೀಯ

ಪ್ರತಾಪ್‌ ಸಿಂಹ ಬೆಂಬಲದ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್‌ ಒಡೆಯರ್‌

ಬೆಂಗಳೂರು: ನಿನ್ನೆಯಷ್ಟೇ ( ಮಾರ್ಚ್‌ 13 ) ಲೋಕಸಭೆ ಚುನಾವಣೆಗೆ ಬಿಜೆಪಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಟಿಕೆಟ್‌ ಪಡೆದುಕೊಂಡಿದ್ದರು.

ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಇಂದು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಯದುವೀರ್‌ ಅವರಿಗೆ ಆರತಿ ಮಾಡಿ ಸ್ವಾಗತಿಸಲಾಯಿತು. ಬಳಿಕ ಮಾಧ್ಯಮದವರೊಡನೆ ಮಾತನಾಡಿದ ಯದುವೀರ್‌ ಒಡೆಯರ್‌ ಕ್ಷೇತ್ರದ ಟಿಕೆಟ್‌ನಿಂದ ವಂಚಿತರಾದ ಪ್ರತಾಪ್‌ ಸಿಂಹ ಕುರಿತಾಗಿ, ರಾಜಕೀಯ ಪ್ರವೇಶದ ಕುರಿತಾಗಿ ಹಾಗೂ ಕ್ಷೇತ್ರದ ಕುರಿತಾಗಿ ಮಾತನಾಡಿದರು.

“ನನಗೆ ತುಂಬಾ ಸಂತೋಷ ಇದೆ. ಕಳೆದ ಒಂದು ವರ್ಷದಿಂದ ರಾಜಕೀಯದ ಚರ್ಚೆ ನಡೆಯುತ್ತಾ ಇತ್ತು. ಈಗ ಅದರ ಅವಕಾಶ ಸಿಕ್ಕಿದೆ. ಇಲ್ಲಿ ರಾಜ, ಜನ ಸಾಮಾನ್ಯ ಅನ್ನೋದಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಅನ್ನೋದಿಲ್ಲ. ಇಲ್ಲಿ ಎಲ್ಲರೂ ಒಂದೇ” ಎಂದು ಹೇಳಿಕೆಯನ್ನು ನೀಡಿದರು.

ಇನ್ನು ಪ್ರತಾಪ್‌ ಸಿಂಹ ಕುರಿತು ಮಾತನಾಡಿದ ಅವರು “ನನಗೆ ಟಿಕೆಟ್‌ ಸಿಕ್ಕಿರುವುದಕ್ಕೆ ಪ್ರತಾಪ್‌ ಸಿಂಹ ಅವರ ವಿರೋಧವಿಲ್ಲ. ಅವರು ಎರಡು ಬಾರಿ, ಕಳೆದ ಹತ್ತು ವರ್ಷದಿಂದ ಕೆಲಸ ಮಾಡಿದ್ದಾರೆ. ಅವರು ಹಾಕಿಕೊಟ್ಟಿರೋ ಬುನಾದಿಯನ್ನು ನಾನು ಮುಂದುವರಿಸುತ್ತೇನೆ. ಪ್ರತಾಪ್‌ ಸಿಂಹ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಸಹಕಾರ ಇದ್ದೇ ಇದೆ. ನಿನ್ನೆಯೂ ಅವರ ಜತೆ ಮಾತನಾಡಿದ್ದೇನೆ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

“9 ವರ್ಷಗಳ ಕಾಲ ಅರಮನೆ ಜವಾಬ್ದಾರಿ ಹೊತ್ತು ಜನರ ಜತೆ ಬೆರೆತಿದ್ದೇನೆ. ಸಹೋದರನಂತೆ ನನ್ನನ್ನು ಪ್ರೀತಿಸಿದ್ದಾರೆ. ಅವರ ಋಣ ತೀರಿಸುವ ಸಮಯ ಬಂದಿದೆ. ರಾಜಕೀಯದ ಬಗ್ಗೆ ಕಳೆದ ಒಂದು ವರ್ಷದಿಂದ ಮನಸ್ಸು ಮಾಡಿದ್ದೆ. ಸಾರ್ವಜನಿಕರ ಸೇವೆಗೆ ಅವಕಾಶವಿದು. ಅಧಿಕಾರವಿದ್ದರೆ ಅಭಿವೃದ್ಧಿ ಮಾಡಬಹುದು. ಪ್ರತಾಪ್‌ ನನ್ನ ಜತೆ ಮಾತನಾಡುವಾಗ ನನ್ನ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ” ಎಂದರು. ಇನ್ನು ಪ್ರತಾಪ್‌ ಸಿಂಹ ಅವರ ಈ ಮಾತನ್ನೇ ಸಂದೇಶವೆಂದುಕೊಳ್ಳುತ್ತೇನೆ ಎಂದ ಅವರು ಪ್ರತಾಪ್‌ ಸಿಂಹ ಅವರ ಬೆಂಬಲಿಗರ ಪ್ರತಿಭಟನೆ ಒಳ ಏಟು ಕೊಡಬಹುದಾ ಎಂಬ ಪ್ರಶ್ನೆಗೆ ಇಲ್ಲ ಎಲ್ಲರೂ ನನ್ನನ್ನು ಮಗ ಹಾಗೂ ಸಹೋದರನಂತೆ ಕಂಡಿದ್ದಾರೆ ಎಂದರು.

andolana

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

33 mins ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

38 mins ago

ಬೇಬಿ ಬೆಟ್ಟದ ಜಾತ್ರೆಯಲ್ಲಿ ಹಳ್ಳಿಕಾರ್ ದರ್ಬಾರ್!

ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…

43 mins ago

ಹೀಗೊಂದು ಬೆಕ್ಕಾಯಣ

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…

48 mins ago

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…

54 mins ago

‘ಗಾಡ್ ಫಾದರ್’ ಇಲ್ಲದೇ ಬರೆಯಲಾಗುವುದಿಲ್ಲವೇ?

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…

58 mins ago