ರಾಜಕೀಯ

ಪ್ರತಾಪ್‌ ಸಿಂಹ ಬೆಂಬಲದ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್‌ ಒಡೆಯರ್‌

ಬೆಂಗಳೂರು: ನಿನ್ನೆಯಷ್ಟೇ ( ಮಾರ್ಚ್‌ 13 ) ಲೋಕಸಭೆ ಚುನಾವಣೆಗೆ ಬಿಜೆಪಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಟಿಕೆಟ್‌ ಪಡೆದುಕೊಂಡಿದ್ದರು.

ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಇಂದು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಯದುವೀರ್‌ ಅವರಿಗೆ ಆರತಿ ಮಾಡಿ ಸ್ವಾಗತಿಸಲಾಯಿತು. ಬಳಿಕ ಮಾಧ್ಯಮದವರೊಡನೆ ಮಾತನಾಡಿದ ಯದುವೀರ್‌ ಒಡೆಯರ್‌ ಕ್ಷೇತ್ರದ ಟಿಕೆಟ್‌ನಿಂದ ವಂಚಿತರಾದ ಪ್ರತಾಪ್‌ ಸಿಂಹ ಕುರಿತಾಗಿ, ರಾಜಕೀಯ ಪ್ರವೇಶದ ಕುರಿತಾಗಿ ಹಾಗೂ ಕ್ಷೇತ್ರದ ಕುರಿತಾಗಿ ಮಾತನಾಡಿದರು.

“ನನಗೆ ತುಂಬಾ ಸಂತೋಷ ಇದೆ. ಕಳೆದ ಒಂದು ವರ್ಷದಿಂದ ರಾಜಕೀಯದ ಚರ್ಚೆ ನಡೆಯುತ್ತಾ ಇತ್ತು. ಈಗ ಅದರ ಅವಕಾಶ ಸಿಕ್ಕಿದೆ. ಇಲ್ಲಿ ರಾಜ, ಜನ ಸಾಮಾನ್ಯ ಅನ್ನೋದಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಅನ್ನೋದಿಲ್ಲ. ಇಲ್ಲಿ ಎಲ್ಲರೂ ಒಂದೇ” ಎಂದು ಹೇಳಿಕೆಯನ್ನು ನೀಡಿದರು.

ಇನ್ನು ಪ್ರತಾಪ್‌ ಸಿಂಹ ಕುರಿತು ಮಾತನಾಡಿದ ಅವರು “ನನಗೆ ಟಿಕೆಟ್‌ ಸಿಕ್ಕಿರುವುದಕ್ಕೆ ಪ್ರತಾಪ್‌ ಸಿಂಹ ಅವರ ವಿರೋಧವಿಲ್ಲ. ಅವರು ಎರಡು ಬಾರಿ, ಕಳೆದ ಹತ್ತು ವರ್ಷದಿಂದ ಕೆಲಸ ಮಾಡಿದ್ದಾರೆ. ಅವರು ಹಾಕಿಕೊಟ್ಟಿರೋ ಬುನಾದಿಯನ್ನು ನಾನು ಮುಂದುವರಿಸುತ್ತೇನೆ. ಪ್ರತಾಪ್‌ ಸಿಂಹ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಸಹಕಾರ ಇದ್ದೇ ಇದೆ. ನಿನ್ನೆಯೂ ಅವರ ಜತೆ ಮಾತನಾಡಿದ್ದೇನೆ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

“9 ವರ್ಷಗಳ ಕಾಲ ಅರಮನೆ ಜವಾಬ್ದಾರಿ ಹೊತ್ತು ಜನರ ಜತೆ ಬೆರೆತಿದ್ದೇನೆ. ಸಹೋದರನಂತೆ ನನ್ನನ್ನು ಪ್ರೀತಿಸಿದ್ದಾರೆ. ಅವರ ಋಣ ತೀರಿಸುವ ಸಮಯ ಬಂದಿದೆ. ರಾಜಕೀಯದ ಬಗ್ಗೆ ಕಳೆದ ಒಂದು ವರ್ಷದಿಂದ ಮನಸ್ಸು ಮಾಡಿದ್ದೆ. ಸಾರ್ವಜನಿಕರ ಸೇವೆಗೆ ಅವಕಾಶವಿದು. ಅಧಿಕಾರವಿದ್ದರೆ ಅಭಿವೃದ್ಧಿ ಮಾಡಬಹುದು. ಪ್ರತಾಪ್‌ ನನ್ನ ಜತೆ ಮಾತನಾಡುವಾಗ ನನ್ನ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ” ಎಂದರು. ಇನ್ನು ಪ್ರತಾಪ್‌ ಸಿಂಹ ಅವರ ಈ ಮಾತನ್ನೇ ಸಂದೇಶವೆಂದುಕೊಳ್ಳುತ್ತೇನೆ ಎಂದ ಅವರು ಪ್ರತಾಪ್‌ ಸಿಂಹ ಅವರ ಬೆಂಬಲಿಗರ ಪ್ರತಿಭಟನೆ ಒಳ ಏಟು ಕೊಡಬಹುದಾ ಎಂಬ ಪ್ರಶ್ನೆಗೆ ಇಲ್ಲ ಎಲ್ಲರೂ ನನ್ನನ್ನು ಮಗ ಹಾಗೂ ಸಹೋದರನಂತೆ ಕಂಡಿದ್ದಾರೆ ಎಂದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

13 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago