ಹುಬ್ಬಳ್ಳಿ : ಯತೀಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ. ಅವರು ಭಾರೀ ಭ್ರಷ್ಟರಿದ್ದಾರೆ. ಯತೀಂದ್ರ ಅವರನ್ನು ಏಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದೀರಿ ಎಂದು ಮಾತಿನ ಭರದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ.
ವಿಜಯೇಂದ್ರ ಹೆಸರಿನ ಬದಲಿಗೆ ಯತೀಂದ್ರ ಹೆಸರನ್ನು ಉಲ್ಲೇಖಿಸಿ ಸಚಿವರು ಹೊಸದೊಂದು ಚರ್ಚೆಗೆ ಮುನ್ನುಡಿ ಬರೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದ್ರದ್ವಯರ ಹೆಸರಿನಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಬಳಿಕ ಎಚ್ಚೆತ್ತುಕೊಂಡ ಸಂತೋಷ್ ಲಾಡ್ ನಾನು ಮಾತನಾಡಿದ್ದು ವಿಜಯೇಂದ್ರ ಬಗ್ಗೆ ಯತೀಂದ್ರ ಅವರ ಬಗ್ಗೆಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಕಾಲ್ ಸಂಭಾಷಣೆಯ ವಿಡಿಯೋ ವೈರಲ್ ಆಗಿ ವಿಪಕ್ಷಗಳ ಟೀಕೆಗೆ ಗುರಿಯಾಗಿರುವ ಹೊತ್ತಲ್ಲೆ ಸಚಿವ ಸಂತೋಷ್ ಲಾಡ್ ಈ ರೀತಿಯ ಹೇಳಿಕೆ ನೀಡಿರುವುದು ಹೊಸದೊಂದು ಚರ್ಚೆಗೆ ಮುನ್ನುಡಿ ಬರೆದಂತಾಗಿದೆ.
ಹಲವು ದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗಷ್ಟೇ ಬಿ.ವೈ ವಿಜಯೇಂದ್ರ ನೇಮಕಗೊಂಡಿದ್ದರು. ರಾಜ್ಯ ಬಿಜೆಪಿಯ 11 ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದರು.
ಇನ್ನು ತಮಗೆ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ವಿಜಯೇಂದ್ರ, ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ. ಯಾರಿಗೆ ರಾಜ್ಯಾಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂಬುದರ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ನನಗೆ ಈ ಜವಬ್ದಾರಿ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…
ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…
ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.…
ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…