ಹುಬ್ಬಳ್ಳಿ : ಯತೀಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ. ಅವರು ಭಾರೀ ಭ್ರಷ್ಟರಿದ್ದಾರೆ. ಯತೀಂದ್ರ ಅವರನ್ನು ಏಕೆ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದೀರಿ ಎಂದು ಮಾತಿನ ಭರದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ.
ವಿಜಯೇಂದ್ರ ಹೆಸರಿನ ಬದಲಿಗೆ ಯತೀಂದ್ರ ಹೆಸರನ್ನು ಉಲ್ಲೇಖಿಸಿ ಸಚಿವರು ಹೊಸದೊಂದು ಚರ್ಚೆಗೆ ಮುನ್ನುಡಿ ಬರೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದ್ರದ್ವಯರ ಹೆಸರಿನಲ್ಲಿ ಗೊಂದಲಕ್ಕೊಳಗಾಗಿದ್ದಾರೆ.ಬಳಿಕ ಎಚ್ಚೆತ್ತುಕೊಂಡ ಸಂತೋಷ್ ಲಾಡ್ ನಾನು ಮಾತನಾಡಿದ್ದು ವಿಜಯೇಂದ್ರ ಬಗ್ಗೆ ಯತೀಂದ್ರ ಅವರ ಬಗ್ಗೆಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಫೋನ್ ಕಾಲ್ ಸಂಭಾಷಣೆಯ ವಿಡಿಯೋ ವೈರಲ್ ಆಗಿ ವಿಪಕ್ಷಗಳ ಟೀಕೆಗೆ ಗುರಿಯಾಗಿರುವ ಹೊತ್ತಲ್ಲೆ ಸಚಿವ ಸಂತೋಷ್ ಲಾಡ್ ಈ ರೀತಿಯ ಹೇಳಿಕೆ ನೀಡಿರುವುದು ಹೊಸದೊಂದು ಚರ್ಚೆಗೆ ಮುನ್ನುಡಿ ಬರೆದಂತಾಗಿದೆ.
ಹಲವು ದಿನಗಳಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗಷ್ಟೇ ಬಿ.ವೈ ವಿಜಯೇಂದ್ರ ನೇಮಕಗೊಂಡಿದ್ದರು. ರಾಜ್ಯ ಬಿಜೆಪಿಯ 11 ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಳೀನ್ ಕುಮಾರ್ ಕಟೀಲ್ ಅವರು ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದರು.
ಇನ್ನು ತಮಗೆ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ವಿಜಯೇಂದ್ರ, ಯುವಕರಿಗೆ ಅವಕಾಶ ಕೊಡಬೇಕು ಎಂದು ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಿದ್ದಾರೆ. ನಾನು ವಿಜಯೇಂದ್ರ ಎಂದಾಗಲಿ ಅಥವಾ ಯಡಿಯೂರಪ್ಪನವರ ಮಗ ಎಂದಾಗಲಿ ನನ್ನನ್ನು ಆಯ್ಕೆ ಮಾಡಿಲ್ಲ. ಯಾರಿಗೆ ರಾಜ್ಯಾಧ್ಯಕ್ಷರ ಸ್ಥಾನವನ್ನು ನೀಡಬೇಕು ಎಂಬುದರ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ನನಗೆ ಈ ಜವಬ್ದಾರಿ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…