ಬೆಳಗಾವಿ : ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದಲ್ಲಿ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ, ಧರ್ಮಾಧಿಕಾರಿ ತನ್ವೀರ್ ಹಶ್ಮಿ ಅವರು ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ನನಗೆ ಬಹಳಾ ವರ್ಷಗಳಿಂದ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲಾ ಇವರು ಸುಮ್ಮನಿದ್ದರು. ಯತ್ನಳ್ ಒಬ್ಬ ಮಹಾನ್ ಸುಳ್ಳುಗಾರ. ಅವರಿಗೆ ವಿಪಕ್ಷ ನಾಯಕ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಅಂತಾ ಬೇಸರ, ಹತಾಶೆ, ಸಿಟ್ಟು. ಅದಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಅವರದೇ ಸರ್ಕಾರವಿದೆ. ತನಿಖೆ ಮಾಡಿಸಲಿ ಎಂದಿದ್ದಾರೆ.
ಯತ್ನಾಳ್ ಅವರ ಆರೋಪದ ಕುರಿತು ನೆನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದ ತನ್ವೀರ್ ಹಶ್ಮಿ ಅವರು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ಈ ದೇಶವನ್ನೇ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಒಂದು ವೇಳೆ ಆರೋಪ ಸಾಬೀತು ಮಾಡುವಲ್ಲಿ ವಿಫಲವಾದರೆ ಯತ್ನಾಳ್ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾಕಿಸ್ತಾನಕ್ಕೆ ಫಲಾಯನ ಮಾಡಬೇಕು ಎಂದು ಸವಾಲು ಹಾಕಿದ್ದರು.
ಯತ್ನಾಳ್ ಅವರು ನನಗೆ ಐಸಿಸ್ ಜೊತೆ ನಂಟಿದೆ ಎಂದು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್ ಬುಕ್ ಖಾತೆಗೆ ನಾನೇ ಅಪ್ಲೋಡ್ ಮಾಡಿದ್ದೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್ ನ ಬಾಗ್ದಾದ್ ಗೆ ತೆರಳಿದ್ದೆ. ಆಗ ತೆಗೆದಿರುವ ಫೊಟೋಗಳು ಎಂದಿದ್ದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…