ಬೆಳಗಾವಿ : ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದಲ್ಲಿ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ, ಧರ್ಮಾಧಿಕಾರಿ ತನ್ವೀರ್ ಹಶ್ಮಿ ಅವರು ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ನನಗೆ ಬಹಳಾ ವರ್ಷಗಳಿಂದ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲಾ ಇವರು ಸುಮ್ಮನಿದ್ದರು. ಯತ್ನಳ್ ಒಬ್ಬ ಮಹಾನ್ ಸುಳ್ಳುಗಾರ. ಅವರಿಗೆ ವಿಪಕ್ಷ ನಾಯಕ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಅಂತಾ ಬೇಸರ, ಹತಾಶೆ, ಸಿಟ್ಟು. ಅದಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಅವರದೇ ಸರ್ಕಾರವಿದೆ. ತನಿಖೆ ಮಾಡಿಸಲಿ ಎಂದಿದ್ದಾರೆ.
ಯತ್ನಾಳ್ ಅವರ ಆರೋಪದ ಕುರಿತು ನೆನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದ ತನ್ವೀರ್ ಹಶ್ಮಿ ಅವರು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ಈ ದೇಶವನ್ನೇ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಒಂದು ವೇಳೆ ಆರೋಪ ಸಾಬೀತು ಮಾಡುವಲ್ಲಿ ವಿಫಲವಾದರೆ ಯತ್ನಾಳ್ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾಕಿಸ್ತಾನಕ್ಕೆ ಫಲಾಯನ ಮಾಡಬೇಕು ಎಂದು ಸವಾಲು ಹಾಕಿದ್ದರು.
ಯತ್ನಾಳ್ ಅವರು ನನಗೆ ಐಸಿಸ್ ಜೊತೆ ನಂಟಿದೆ ಎಂದು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್ ಬುಕ್ ಖಾತೆಗೆ ನಾನೇ ಅಪ್ಲೋಡ್ ಮಾಡಿದ್ದೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್ ನ ಬಾಗ್ದಾದ್ ಗೆ ತೆರಳಿದ್ದೆ. ಆಗ ತೆಗೆದಿರುವ ಫೊಟೋಗಳು ಎಂದಿದ್ದರು.
ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…
• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…
ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…