ಬೆಳಗಾವಿ : ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದಲ್ಲಿ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ, ಧರ್ಮಾಧಿಕಾರಿ ತನ್ವೀರ್ ಹಶ್ಮಿ ಅವರು ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ನನಗೆ ಬಹಳಾ ವರ್ಷಗಳಿಂದ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲಾ ಇವರು ಸುಮ್ಮನಿದ್ದರು. ಯತ್ನಳ್ ಒಬ್ಬ ಮಹಾನ್ ಸುಳ್ಳುಗಾರ. ಅವರಿಗೆ ವಿಪಕ್ಷ ನಾಯಕ ಸ್ಥಾನ ಅಥವಾ ರಾಜ್ಯಾಧ್ಯಕ್ಷ ಸ್ಥಾನ ಸಿಗಲಿಲ್ಲ ಅಂತಾ ಬೇಸರ, ಹತಾಶೆ, ಸಿಟ್ಟು. ಅದಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದಕ್ಕೋಸ್ಕರ ಈ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಅವರದೇ ಸರ್ಕಾರವಿದೆ. ತನಿಖೆ ಮಾಡಿಸಲಿ ಎಂದಿದ್ದಾರೆ.
ಯತ್ನಾಳ್ ಅವರ ಆರೋಪದ ಕುರಿತು ನೆನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿದ್ದ ತನ್ವೀರ್ ಹಶ್ಮಿ ಅವರು ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ನನ್ನ ಮೇಲೆ ಮಾಡಿರುವ ಆರೋಪವನ್ನು ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ಈ ದೇಶವನ್ನೇ ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಒಂದು ವೇಳೆ ಆರೋಪ ಸಾಬೀತು ಮಾಡುವಲ್ಲಿ ವಿಫಲವಾದರೆ ಯತ್ನಾಳ್ ಅವರು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಪಾಕಿಸ್ತಾನಕ್ಕೆ ಫಲಾಯನ ಮಾಡಬೇಕು ಎಂದು ಸವಾಲು ಹಾಕಿದ್ದರು.
ಯತ್ನಾಳ್ ಅವರು ನನಗೆ ಐಸಿಸ್ ಜೊತೆ ನಂಟಿದೆ ಎಂದು ಬಿಡುಗಡೆ ಮಾಡಿರುವ ಚಿತ್ರಗಳು ನನ್ನ ಅಧಿಕೃತ ಫೇಸ್ ಬುಕ್ ಖಾತೆಗೆ ನಾನೇ ಅಪ್ಲೋಡ್ ಮಾಡಿದ್ದೆ. ಸುಮಾರು 12 ವರ್ಷಗಳ ಹಿಂದೆ ನಾನು ಇರಾಖ್ ನ ಬಾಗ್ದಾದ್ ಗೆ ತೆರಳಿದ್ದೆ. ಆಗ ತೆಗೆದಿರುವ ಫೊಟೋಗಳು ಎಂದಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…