ರಾಜಕೀಯ

ಸಮಾಜಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದೀರಿ : ಸಿದ್ದು ವಿರುದ್ದ ಎಚ್ ಡಿಕೆ ವಾಗ್ದಾಳಿ

ಹಾಸನ : ಎಲ್ಲಾ ಜನಗಳಿಂದ ಗೆದ್ದು ಈಗ ಸಮಾಜಗಳನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಹಾಸನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಜಾತಿ ಗಣತಿ ಮಾಡುವ ಮೂಲಕ ಜನಗಳ ಕೈಗಳಲ್ಲಿ ತಮ್ಮ ಬಗ್ಗೆ ಕೆಟ್ಟ ಭಾವನೆ ಬರುವಂತೆ ಮಾಡಿಕೊಳ್ಳುತ್ತಿದ್ದಾರೆ. ಜಾತಿಗಣತಿ ಯಾಕೆ ಬೇಕು ? ಈ ರಾಜ್ಯ ಉದ್ದಾರ ಆಗಬೇಕಾದರೆ ಜಾತಿಗಣತಿ ಬೇಕಿಲ್ಲ. ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮಾಡುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಜಾತಿ ಜಾತಿಗಳನ್ನು ಎತ್ತಿಕಟ್ಟಿ ಹೊಡೆದಾಡಿಸುವ ಕೆಲಸ ಮಾಡಬಾರದು ಎಂದಿದ್ದಾರೆ.

ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುತ್ತಿದ್ದೀರ. ಕೊಡಬೇಡಿ ಎನುವುದಿಲ್ಲ ಆದರೆ ಹಿಂದುಗಳಿಂದ ಹಿಂದುಗಳಿಗೆ ಏನು ಕೊಡ್ತೀರಿ ? ಏನು ಘೋಷಣೆ ಮಾಡಿದ್ದೀರಿ ? ಇದರಲ್ಲೂ ಲೂಟಿ ಹೊಡೆಯೋಕೆ ಪ್ಲಾನ್‌ ಇದೆಯಲ್ಲಾ. ಇವರು ಹೇಗೆಲ್ಲಾ ಕಮಿಷನ್‌ ಹೊಡೆಯುತ್ತಾರೆ ಎನ್ನುವುದು ನನಗೆ ಗೊತ್ತಿದೆ. ಈ ರೀತಿ ಹಣ ಹಂಚೋದಾದ್ರೆ ರೈತರಿಗೆ ಏನು ಕೊಡ್ತೀರಿ ಎಂದು ಪ್ರಶ್ನಿಸಿದ್ದಾರೆ.

ಇನ್ನು ಬಿ.ಕೆ ಹರಿಪ್ರಸಾದ್‌ ವಿಚಾರವಾಗಿ ಮಾತನಾಡಿದ ಎಚ್‌ಡಿಕೆ ಬಿ.ಕೆ ಹರಿಪ್ರಸಾದ್‌ ಮಾತ್ರವಲ್ಲ. ಅಲ್ಲಿ ಇನ್ನೂ ಅನೇಕರಿದ್ದಾರೆ. ಮುಂದೆ ಎಲ್ಲಾ ಧ್ವನಿ ಹೊರಬರುತ್ತದೆ. ಕೇಂದ್ರ ಸರ್ಕಾರದ ಬಳಿ ಹೋಗಿ 50 ಜನ ಕರೆದುಕೊಂಡು ಬರುತ್ತೇವೆ ಎಂದು ಹೊರಟಿದ್ದಾರೆ. ಅವರ ಹಗರಣಗಳನ್ನು ಮುಚ್ಚಿ ಹಾಕಿಕೊಳ್ಳೋದಕ್ಕೆ ಹೋಗಿದ್ದಾರೆ. ಇಂದು ಹರಿಪ್ರಸಾದ್‌ ಅವರನ್ನು ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ ? ಯಾಕೆ ಮಾಡ್ತಿದ್ದಾರೆ ಅನ್ನೋದು ನನಗೆ ಗೊತ್ತು. ಯಾರನ್ನೋ ಬಿಟ್ಟು ಐದಾರು ತಿಂಗಳು ರಿಲೀಫ್‌ ಕೊಡಿ ಅಂತಾ ಹೋಗಿದ್ದು ಗೊತ್ತು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

lokesh

Recent Posts

ಮಳೆ ಕೊರತೆ ನಡುವೆಯೂ ತರಕಾರಿ ಅಗ್ಗ

ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…

1 min ago

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago