ರಾಜಕೀಯ

ಆಂಧ್ರಪ್ರದೇಶದ ನೂತನ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ವೈಎಸ್‌ ಶರ್ಮಿಳಾ ನೇಮಕ

ಕಳೆದ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ವೈ ಎಸ್‌ ರಾಜಶೇಖರ ರೆಡ್ಡಿ ಪುತ್ರಿ ವೈಎಸ್‌ ಶರ್ಮಿಳಾರನ್ನು ಇದೀಗ ಆಂಧ್ರಪ್ರದೇಶ ರಾಜ್ಯ ಘಟಕದ ಅಧ್ಯಕ್ಷೆಯನ್ನಾಗಿ ನೇಮಿಸಿದೆ. ತಮ್ಮ ವೈಎಸ್‌ಆರ್‌ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಪಕ್ಷದ ಜತೆ ವಿಲೀನಗೊಳಿಸುವುದಾಗಿ ಘೋಷಿಸಿದ್ದ ಶರ್ಮಿಳಾ ಜನವರಿ 4ರಂದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ನಿನ್ನೆ ( ಜನವರಿ 15 ) ಗಿಡುಗು ರುದ್ರರಾಜು ಅವರು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಳಗಿಳಿದಿದ್ದರು. ಇದರ ಬೆನ್ನಲ್ಲೇ ಇದೀಗ ಶರ್ಮಿಳಾ ಆ ಸ್ಥಾನಕ್ಕೆ ಏರಿದ್ದಾರೆ. ಶರ್ಮಿಳಾ ಅವರನ್ನು ಅಧ್ಯಕ್ಷೆಯನ್ನಾಗಿ ನೇಮಿಸಿರುವ ಪತ್ರವನ್ನು ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಟ್ವೀಟ್‌ಗೆ ಶರ್ಮಿಳಾ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್‌ನ ಪ್ರಮುಖರಿಗೆ ಕೃತಜ್ಞತೆ ತಿಳಿಸಿದ್ದಾರೆ.

ತನ್ನನ್ನು ನಂಬಿ ರಾಜ್ಯ ಕಾಂಗ್ರೆಸ್‌ ‍ಅಧ್ಯಕ್ಷೆ ಸ್ಥಾನವನ್ನು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಕೆಸಿ ವೇಣುಗೋಪಾಲ್‌ ಅವರಿಗೆ ಧನ್ಯವಾದ ತಿಳಿಸಿ ಟ್ವೀಟ್‌ ಮಾಡಿರುವ ಶರ್ಮಿಳಾ ಈ ಹಿಂದೆ ಆಂಧ್ರಪ್ರದೇಶದಲ್ಲಿದ್ದ ಕಾಂಗ್ರೆಸ್‌ ವೈಭವವನ್ನು ಮರು ನಿರ್ಮಾಣ ಮಾಡಲು ನಿಷ್ಠಾವಂತಳಾಗಿ ಕೆಲಸ ನಿರ್ವಹಿಸುವುದಾಗಿ ಬರೆದುಕೊಂಡಿದ್ದಾರೆ.

andolana

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

53 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

1 hour ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

1 hour ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

2 hours ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

2 hours ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

2 hours ago