ರಾಜಕೀಯ

ಆಂಧ್ರಪ್ರದೇಶದ ನೂತನ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ವೈಎಸ್‌ ಶರ್ಮಿಳಾ ನೇಮಕ

ಕಳೆದ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್‌ ಪಕ್ಷ ಸೇರಿದ್ದ ವೈ ಎಸ್‌ ರಾಜಶೇಖರ ರೆಡ್ಡಿ ಪುತ್ರಿ ವೈಎಸ್‌ ಶರ್ಮಿಳಾರನ್ನು ಇದೀಗ ಆಂಧ್ರಪ್ರದೇಶ ರಾಜ್ಯ ಘಟಕದ ಅಧ್ಯಕ್ಷೆಯನ್ನಾಗಿ ನೇಮಿಸಿದೆ. ತಮ್ಮ ವೈಎಸ್‌ಆರ್‌ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್‌ ಪಕ್ಷದ ಜತೆ ವಿಲೀನಗೊಳಿಸುವುದಾಗಿ ಘೋಷಿಸಿದ್ದ ಶರ್ಮಿಳಾ ಜನವರಿ 4ರಂದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ನಿನ್ನೆ ( ಜನವರಿ 15 ) ಗಿಡುಗು ರುದ್ರರಾಜು ಅವರು ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಕೆಳಗಿಳಿದಿದ್ದರು. ಇದರ ಬೆನ್ನಲ್ಲೇ ಇದೀಗ ಶರ್ಮಿಳಾ ಆ ಸ್ಥಾನಕ್ಕೆ ಏರಿದ್ದಾರೆ. ಶರ್ಮಿಳಾ ಅವರನ್ನು ಅಧ್ಯಕ್ಷೆಯನ್ನಾಗಿ ನೇಮಿಸಿರುವ ಪತ್ರವನ್ನು ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಟ್ವೀಟ್‌ಗೆ ಶರ್ಮಿಳಾ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್‌ನ ಪ್ರಮುಖರಿಗೆ ಕೃತಜ್ಞತೆ ತಿಳಿಸಿದ್ದಾರೆ.

ತನ್ನನ್ನು ನಂಬಿ ರಾಜ್ಯ ಕಾಂಗ್ರೆಸ್‌ ‍ಅಧ್ಯಕ್ಷೆ ಸ್ಥಾನವನ್ನು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಕೆಸಿ ವೇಣುಗೋಪಾಲ್‌ ಅವರಿಗೆ ಧನ್ಯವಾದ ತಿಳಿಸಿ ಟ್ವೀಟ್‌ ಮಾಡಿರುವ ಶರ್ಮಿಳಾ ಈ ಹಿಂದೆ ಆಂಧ್ರಪ್ರದೇಶದಲ್ಲಿದ್ದ ಕಾಂಗ್ರೆಸ್‌ ವೈಭವವನ್ನು ಮರು ನಿರ್ಮಾಣ ಮಾಡಲು ನಿಷ್ಠಾವಂತಳಾಗಿ ಕೆಲಸ ನಿರ್ವಹಿಸುವುದಾಗಿ ಬರೆದುಕೊಂಡಿದ್ದಾರೆ.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago